ಕೃಷ್ಣಾ ನೀರನ್ನು ಹೊಸದಾಗಿ ಹಂಚಿಕೆ ಮಾಡುವಂತೆ ನ್ಯಾಯಮಂಡಳಿಗೆ ನಿರ್ದೇಶನ ನೀಡಬೇಕು ಎಂಬ ತೆಲಂಗಾಣದ ಕೋರಿಕೆಯನ್ನು ಕಳೆದ ವಾರವಷ್ಟೇ ನಡೆದ ಮುಖ್ಯಮಂತ್ರಿಯವರ ಸಭೆಯಲ್ಲಿ ಪುರಸ್ಕರಿಸಿದ್ದ ಕೇಂದ್ರ, ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾಗಿರುವ ಮೇಲ್ಮನವಿಯನ್ನು ವಾಪಸ್ ಪಡೆದರೆ ಈ ಸಂಬಂಧ ಪರಿಶೀಲನೆ ನಡೆಸಲಾಗುವುದು ಎಂಬ ಭರವಸೆ ನೀಡಿತ್ತು.