‘ಮರು ವಿಚಾರಣೆ ನಡೆಸುವಂತೆ ತೆಲಂಗಾಣ ಸರ್ಕಾರ ಆಗ್ರಹಿಸಿದೆ. ಈ ಕಾರಣಕ್ಕಾಗಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರೊಂದಿಗೆ ದೂರವಾಣಿ ಮೂಲಕ ಶನಿವಾರ ಚರ್ಚೆ ನಡೆಸಲಾಗಿದೆ. 2013ರಲ್ಲೇ ಕೃಷ್ಣಾ ನದಿ ನೀರಿನ ಹಂಚಿಕೆ ಕುರಿತು ತೀರ್ಮಾನವಾಗಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ನೀರು ಹಂಚಿಕೆ ಮಾಡಲಾಗಿದೆ. ನ್ಯಾಯಮಂಡಳಿ ಐತೀರ್ಪಿನ ಜಾರಿಗೆ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿರುವಾಗ ತೆಲಂಗಾಣ ಸರ್ಕಾರ ತಗಾದೆ ತೆಗೆದಿದೆ. ಅದನ್ನು ಮಾನ್ಯ ಮಾಡದಂತೆ ಒತ್ತಾಯ ಮಾಡಲಾಗಿದೆ’ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.