<p><strong>ಬೆಂಗಳೂರು:</strong> ಕೃಷ್ಣಾ ಮೇಲ್ದಂಡೆ ಯೋಜನೆ- 3 ನೇ ಹಂತದ ಕಾಮಗಾರಿಗಳಿಗೆ ಅಗತ್ಯವಿರುವ ಜಮೀನಿಗೆ ಪರಿಹಾರ ನೀಡುವ ವಿಚಾರವಾಗಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಇದೇ 16ರಂದು ಸಚಿವ ಸಂಪುಟದ ವಿಶೇಷ ಸಭೆ ಕರೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ–3ರ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳುವುದರ ಜತೆಗೆ, ಏಕರೂಪದ ದರ ನಿಗದಿಪಡಿಸಲು ಮತ್ತು ಇತರ ಆಡಳಿತಾತ್ಮಕ ವಿಷಯಗಳಿಗೆ ಅನುಮೋದನೆ ನೀಡುವ ಕುರಿತು ವಿಸ್ತೃತ ಚರ್ಚೆ ನಡೆಯಿತು ಎಂದು ಅವರು ತಿಳಿಸಿದರು.</p>.<p>‘ಸುಮಾರು ಒಂದು ಗಂಟೆಗೂ ಹೆಚ್ಚು ಈ ಕುರಿತು ಚರ್ಚೆ ನಡೆಯಿತು. ಸ್ವಾಧೀನಗೊಳ್ಳುವ ಪ್ರತಿ ಎಕರೆಗೆ ಪರಿಹಾರ ಮೊತ್ತ ಎಷ್ಟು ನಿಗದಿ ಮಾಡಬಹುದು ಎಂಬ ಬಗ್ಗೆ ಹಲವು ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಯೋಜನೆ ಪೂರ್ಣಗೊಳಿಸಲು 75,000 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಬೇಕಾಗುತ್ತದೆ. ಇದಕ್ಕೆ ಪರಿಹಾರದ ಮೊತ್ತ ಭಾರಿ ಪ್ರಮಾಣವಾಗುತ್ತದೆ. ಇದಕ್ಕೆ ಎಲ್ಲಿಂದ ಹಣ ಹೊಂದಿಸಬಹುದು ಎಂಬ ಚರ್ಚೆಯೂ ನಡೆಯಿತು. ಬಾಂಡ್ ಬಿಡುಗಡೆ ಮೂಲಕ ಹಣ ಸಂಗ್ರಹಿಸುವ ಬಗ್ಗೆಯೂ ಗಂಭೀರ ಚರ್ಚೆ ನಡೆಯಿತು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೃಷ್ಣಾ ಮೇಲ್ದಂಡೆ ಯೋಜನೆ- 3 ನೇ ಹಂತದ ಕಾಮಗಾರಿಗಳಿಗೆ ಅಗತ್ಯವಿರುವ ಜಮೀನಿಗೆ ಪರಿಹಾರ ನೀಡುವ ವಿಚಾರವಾಗಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಇದೇ 16ರಂದು ಸಚಿವ ಸಂಪುಟದ ವಿಶೇಷ ಸಭೆ ಕರೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ–3ರ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳುವುದರ ಜತೆಗೆ, ಏಕರೂಪದ ದರ ನಿಗದಿಪಡಿಸಲು ಮತ್ತು ಇತರ ಆಡಳಿತಾತ್ಮಕ ವಿಷಯಗಳಿಗೆ ಅನುಮೋದನೆ ನೀಡುವ ಕುರಿತು ವಿಸ್ತೃತ ಚರ್ಚೆ ನಡೆಯಿತು ಎಂದು ಅವರು ತಿಳಿಸಿದರು.</p>.<p>‘ಸುಮಾರು ಒಂದು ಗಂಟೆಗೂ ಹೆಚ್ಚು ಈ ಕುರಿತು ಚರ್ಚೆ ನಡೆಯಿತು. ಸ್ವಾಧೀನಗೊಳ್ಳುವ ಪ್ರತಿ ಎಕರೆಗೆ ಪರಿಹಾರ ಮೊತ್ತ ಎಷ್ಟು ನಿಗದಿ ಮಾಡಬಹುದು ಎಂಬ ಬಗ್ಗೆ ಹಲವು ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಯೋಜನೆ ಪೂರ್ಣಗೊಳಿಸಲು 75,000 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಬೇಕಾಗುತ್ತದೆ. ಇದಕ್ಕೆ ಪರಿಹಾರದ ಮೊತ್ತ ಭಾರಿ ಪ್ರಮಾಣವಾಗುತ್ತದೆ. ಇದಕ್ಕೆ ಎಲ್ಲಿಂದ ಹಣ ಹೊಂದಿಸಬಹುದು ಎಂಬ ಚರ್ಚೆಯೂ ನಡೆಯಿತು. ಬಾಂಡ್ ಬಿಡುಗಡೆ ಮೂಲಕ ಹಣ ಸಂಗ್ರಹಿಸುವ ಬಗ್ಗೆಯೂ ಗಂಭೀರ ಚರ್ಚೆ ನಡೆಯಿತು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>