<p><strong>ಶಿವಮೊಗ್ಗ:</strong> 'ಮುಸ್ಲಿಮರ ಮತ ಕೈತಪ್ಪುತ್ತವೆ ಎಂಬ ಭ್ರಮೆಯಿಂದ ರಾಮ ಮಂದಿರ ಪ್ರತಿಷ್ಠಾಪನೆ ದಿನ ಸೋಮವಾರ ರಾಜ್ಯದಲ್ಲಿ ರಜೆ ಘೋಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿಲ್ಲ' ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಮ ಭಕ್ತರ, ಸಾಧು ಸಂತರ ಶಾಪದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಶ್ಚಿತವಾಗಿ ಸೋಲು ಕಾಣಲಿದೆ' ಎಂದು ಭವಿಷ್ಯ ನುಡಿದರು.</p><p>ರಾಮಮಂದಿರ ಲೋಕಾರ್ಪಣೆ ಸಂದರ್ಭ ಇಡೀ ಪ್ರಪಂಚಕ್ಕೆ ಐತಿಹಾಸಿಕ ದಿನ. ಪ್ರಪಂಚದ ಹಿಂದೂಗಳು ಶತಮಾನಗಳ ಕಾಲ ನೆನಪಿನಲ್ಲಿಟ್ಟುಕೊಳ್ಳುವ ಸಂದರ್ಭ. 500 ವರ್ಷಗಳ ಹೋರಾಟ, ಸಾವಿರಾರು ಬಲಿದಾನಗಳ ಕಾರಣ ಈ ದಿನ ಬಂದಿದೆ. ಹೀಗಾಗಿಯೇ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಿಸಿದ್ದಾರೆ. ಆ ದಿನವನ್ನು ದೀಪಾವಳಿ ಹಬ್ಬದಂತೆ ಸಂಭ್ರಮದಿಂದ ಆಚರಣೆಗೆ ಕರೆ ಕೊಟ್ಟಿದ್ದಾರೆ ಎಂದರು. </p><p>ಆದರೆ ರಾಜ್ಯದಲ್ಲಿ ರಜೆ ಘೋಷಣೆ ಮಾಡೊಲ್ಲ ಎಂದು ಸಿದ್ದರಾಮಯ್ಯ ಖಡಾಖಂಡಿತವಾಗಿ ಹೇಳಿದ್ದಾರೆ. ಪ್ರತಿಷ್ಠಾಪನೆ ದಿನ ಶ್ರೀರಾಮನ ಹೆಸರು ಅಜರಾಮರದ ರೀತಿ ಉಳಿದರೆ ಸಿದ್ದರಾಮಯ್ಯ ಹೆಸರು ಖಳನಾಯಕನ ರೀತಿ ಉಳಿಯಲಿದೆ ಎಂದರು.</p><p>ರಾಜ್ಯದಲ್ಲಿ ರಜೆ ಘೋಷಣೆ ಮಾಡಿ ಖಳನಾಯಕ ಹಣೇಪಟ್ಟಿ ಸಿದ್ದರಾಮಯ್ಯ ಕಳಚಿಕೊಳ್ಳಲಿ ಎಂದು ಸಲಹೆ ನೀಡಿದರು.</p><p>ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಗೆಲ್ಲುವ ಪ್ರಶ್ನೆಯೇ ಇಲ್ಲ. ಹೀಗಾಗಿ ಚುನಾವಣೆ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವುದು ನಿಶ್ಚಿತ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> 'ಮುಸ್ಲಿಮರ ಮತ ಕೈತಪ್ಪುತ್ತವೆ ಎಂಬ ಭ್ರಮೆಯಿಂದ ರಾಮ ಮಂದಿರ ಪ್ರತಿಷ್ಠಾಪನೆ ದಿನ ಸೋಮವಾರ ರಾಜ್ಯದಲ್ಲಿ ರಜೆ ಘೋಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿಲ್ಲ' ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಮ ಭಕ್ತರ, ಸಾಧು ಸಂತರ ಶಾಪದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಶ್ಚಿತವಾಗಿ ಸೋಲು ಕಾಣಲಿದೆ' ಎಂದು ಭವಿಷ್ಯ ನುಡಿದರು.</p><p>ರಾಮಮಂದಿರ ಲೋಕಾರ್ಪಣೆ ಸಂದರ್ಭ ಇಡೀ ಪ್ರಪಂಚಕ್ಕೆ ಐತಿಹಾಸಿಕ ದಿನ. ಪ್ರಪಂಚದ ಹಿಂದೂಗಳು ಶತಮಾನಗಳ ಕಾಲ ನೆನಪಿನಲ್ಲಿಟ್ಟುಕೊಳ್ಳುವ ಸಂದರ್ಭ. 500 ವರ್ಷಗಳ ಹೋರಾಟ, ಸಾವಿರಾರು ಬಲಿದಾನಗಳ ಕಾರಣ ಈ ದಿನ ಬಂದಿದೆ. ಹೀಗಾಗಿಯೇ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಿಸಿದ್ದಾರೆ. ಆ ದಿನವನ್ನು ದೀಪಾವಳಿ ಹಬ್ಬದಂತೆ ಸಂಭ್ರಮದಿಂದ ಆಚರಣೆಗೆ ಕರೆ ಕೊಟ್ಟಿದ್ದಾರೆ ಎಂದರು. </p><p>ಆದರೆ ರಾಜ್ಯದಲ್ಲಿ ರಜೆ ಘೋಷಣೆ ಮಾಡೊಲ್ಲ ಎಂದು ಸಿದ್ದರಾಮಯ್ಯ ಖಡಾಖಂಡಿತವಾಗಿ ಹೇಳಿದ್ದಾರೆ. ಪ್ರತಿಷ್ಠಾಪನೆ ದಿನ ಶ್ರೀರಾಮನ ಹೆಸರು ಅಜರಾಮರದ ರೀತಿ ಉಳಿದರೆ ಸಿದ್ದರಾಮಯ್ಯ ಹೆಸರು ಖಳನಾಯಕನ ರೀತಿ ಉಳಿಯಲಿದೆ ಎಂದರು.</p><p>ರಾಜ್ಯದಲ್ಲಿ ರಜೆ ಘೋಷಣೆ ಮಾಡಿ ಖಳನಾಯಕ ಹಣೇಪಟ್ಟಿ ಸಿದ್ದರಾಮಯ್ಯ ಕಳಚಿಕೊಳ್ಳಲಿ ಎಂದು ಸಲಹೆ ನೀಡಿದರು.</p><p>ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಗೆಲ್ಲುವ ಪ್ರಶ್ನೆಯೇ ಇಲ್ಲ. ಹೀಗಾಗಿ ಚುನಾವಣೆ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವುದು ನಿಶ್ಚಿತ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>