<p><strong>ಬೆಂಗಳೂರು</strong>: ಶಾಸಕ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರೂ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳಿದ್ದ ಮಾಜಿ ಶಾಸಕ ಕೆ.ಎಸ್ ಈಶ್ವರಪ್ಪ ಅವರನ್ನು ಕಾಂಗ್ರೆಸ್ ತಮಾಷೆ ಮಾಡಿದೆ.</p><p>ಈಗ ಬಿಜೆಪಿ ಕಾರ್ಯಕ್ರಮದಲ್ಲಿ ನಿಮಗೊಂದು ಕುರ್ಚಿಯೂ ಕೂಡ ಇಲ್ಲ ಎಂದು ಕುಹಕವಾಡಿದೆ.</p>.BJP ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಬಿಜೆಪಿಯಲ್ಲಿ ಸಂಭ್ರಮದ ಜೊತೆ ಮುನಿಸು!. <p>ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ರಿಟೈರ್ಡ್ ರಾಜಾಕಾರಣಿ ಈಶ್ವರಪ್ಪ ಅವರೇ, ಇದೆಂತಹ ದುಸ್ಥಿತಿ ನಿಮ್ಮದು? ಬಿಜೆಪಿ ನಿಮ್ಮ ಮಂತ್ರಿಗಿರಿ ಕಿತ್ತುಕೊಂಡಿತು. ನಿಮ್ಮನ್ನು ಸಿಎಂ ಮಾಡದೆ ವಂಚಿಸಿತು. ಕೊನೆಗೆ ಟಿಕೆಟ್ ನಿರಾಕರಿಸಿ ರಾಜಕೀಯ ಭವಿಷ್ಯವನ್ನೂ ಕಸಿಯಿತು’ ಎಂದು ಬರೆದುಕೊಂಡಿದೆ.</p>.ವಿಜಯೇಂದ್ರ ನೇಮಕ: ಇದು, ಕುಟುಂಬ ರಾಜಕಾರಣವಲ್ಲವೇ- ಪ್ರಿಯಾಂಕ್ ಪ್ರಶ್ನೆ. <p>ಈಗ ಯಡಿಯೂರಪ್ಪನವರ ಮಗ ನಿಮ್ಮ ಮಗನ ರಾಜಕೀಯ ಭವಿಷ್ಯಕ್ಕೂ ಕಲ್ಲು ಹಾಕುವುದು ಖಚಿತ. ಬಿಜೆಪಿ ಕಾರ್ಯಕ್ರಮದಲ್ಲಿ ನಿಮಗೊಂದು ಕುರ್ಚಿಯೂ ಇಲ್ಲ. ನಿಮ್ಮ ವ್ಯರ್ಥಪ್ರಲಾಪದ ಬಗ್ಗೆ ನಮಗೆ ಮರುಕವಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಾಸಕ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರೂ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳಿದ್ದ ಮಾಜಿ ಶಾಸಕ ಕೆ.ಎಸ್ ಈಶ್ವರಪ್ಪ ಅವರನ್ನು ಕಾಂಗ್ರೆಸ್ ತಮಾಷೆ ಮಾಡಿದೆ.</p><p>ಈಗ ಬಿಜೆಪಿ ಕಾರ್ಯಕ್ರಮದಲ್ಲಿ ನಿಮಗೊಂದು ಕುರ್ಚಿಯೂ ಕೂಡ ಇಲ್ಲ ಎಂದು ಕುಹಕವಾಡಿದೆ.</p>.BJP ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಬಿಜೆಪಿಯಲ್ಲಿ ಸಂಭ್ರಮದ ಜೊತೆ ಮುನಿಸು!. <p>ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ರಿಟೈರ್ಡ್ ರಾಜಾಕಾರಣಿ ಈಶ್ವರಪ್ಪ ಅವರೇ, ಇದೆಂತಹ ದುಸ್ಥಿತಿ ನಿಮ್ಮದು? ಬಿಜೆಪಿ ನಿಮ್ಮ ಮಂತ್ರಿಗಿರಿ ಕಿತ್ತುಕೊಂಡಿತು. ನಿಮ್ಮನ್ನು ಸಿಎಂ ಮಾಡದೆ ವಂಚಿಸಿತು. ಕೊನೆಗೆ ಟಿಕೆಟ್ ನಿರಾಕರಿಸಿ ರಾಜಕೀಯ ಭವಿಷ್ಯವನ್ನೂ ಕಸಿಯಿತು’ ಎಂದು ಬರೆದುಕೊಂಡಿದೆ.</p>.ವಿಜಯೇಂದ್ರ ನೇಮಕ: ಇದು, ಕುಟುಂಬ ರಾಜಕಾರಣವಲ್ಲವೇ- ಪ್ರಿಯಾಂಕ್ ಪ್ರಶ್ನೆ. <p>ಈಗ ಯಡಿಯೂರಪ್ಪನವರ ಮಗ ನಿಮ್ಮ ಮಗನ ರಾಜಕೀಯ ಭವಿಷ್ಯಕ್ಕೂ ಕಲ್ಲು ಹಾಕುವುದು ಖಚಿತ. ಬಿಜೆಪಿ ಕಾರ್ಯಕ್ರಮದಲ್ಲಿ ನಿಮಗೊಂದು ಕುರ್ಚಿಯೂ ಇಲ್ಲ. ನಿಮ್ಮ ವ್ಯರ್ಥಪ್ರಲಾಪದ ಬಗ್ಗೆ ನಮಗೆ ಮರುಕವಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>