ಪಕ್ಷದ ರಾಜ್ಯ ಘಟಕದಲ್ಲಿನ ಕೆಲವೊಂದು ಸಮಸ್ಯೆಗಳ ಕುರಿತು ವರಿಷ್ಠರ ಬಳಿ ಅವರು ಪ್ರಸ್ತಾಪಿಸಿದರು. ‘ರಾಜ್ಯದಲ್ಲಿ ಪಕ್ಷ ಸಂಘಟನೆಯಲ್ಲಿ ಹಿರಿಯ ನಾಯಕರ ಶ್ರಮ ದೊಡ್ಡದು. ಆದರೆ, ಇತ್ತೀಚಿನ ಕೆಲವೊಂದು ಬೆಳವಣಿಗೆಗಳಿಂದ ನಾಲ್ಕೈದು ನಾಯಕರು ಅಸಮಾಧಾನಗೊಂಡಿದ್ದಾರೆ. ಚುನಾವಣೆಯ ಹೊತ್ತಿನಲ್ಲಿ ಒಡಕು ಧ್ವನಿಗೆ ಆಸ್ಪದ ನೀಡಬಾರದು. ಹಿರಿಯ ನಾಯಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಹಾಗೂ ಅವರಿಗೆ ಜವಾಬ್ದಾರಿಗಳನ್ನು ನೀಡಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸವನ್ನು ರಾಜ್ಯ ಘಟಕ ಮಾಡಬೇಕು’ ಎಂದು ಈಶ್ವರಪ್ಪ ಅವರು ವರಿಷ್ಠರ ಗಮನಕ್ಕೆ ತಂದರು ಎಂದು ಮೂಲಗಳು ಹೇಳಿವೆ.