ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಬರಲಿದ್ದಾರಂತೆ ಎಂಬುದನ್ನು ಮಾಧ್ಯಮದವರು ಗಮನ ಸೆಳೆದಾಗ ಮೇಲಿನಂತೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಅವರು ಶಿವಮೊಗ್ಗಕ್ಕೆ ಬಂದು ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ (ಚೆನ್ನಿ) ಗೆಲುವಿಗೆ ನೆರವಾಗಲಿ ಎಂದರು.
ಸಿದ್ದರಾಮಯ್ಯ ಲಿಂಗಾಯಿತ ಸಮುದಾಯದ ವಿರುದ್ಧ ಮಾತನಾಡುವುದನ್ನ ಈಗಲೂ ಮುಂದುವರೆಸಿದ್ದಾರೆ. ಆ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಮಾಡಿದಷ್ಟು ದ್ರೋಹ ಯಾರೂ ಮಾಡಿಲ್ಲ. ಲಿಂಗಾಯಿತ ಸಮಾಜವನ್ನು ಒಡೆಯಲು ಹೋಗಿದ್ದರಿಂದಲೇ ಸಿದ್ದರಾಮಯ್ಯ ಸರ್ಕಾರ ಅಧಿಕಾರ ಕಳೆದುಕೊಂಡಿತು ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದರು
ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ. ಅಧಿಕಾರಕ್ಕೆ ಬರುವುದು ಇರಲಿ. ಮೊದಲು ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆದ್ದು ತೋರಿಸಲಿ ಎಂದು ಈಶ್ವರಪ್ಪ ಸವಾಲು ಹಾಕಿದರು.
ಶಿವಮೊಗ್ಗಕ್ಕೆ ಚುನಾವಣೆ ಪ್ರಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರಲಿದ್ದಾರೆ.
ಆಯನೂರು ಸುತ್ತಮುತ್ತ ಸಾರ್ವಜನಿಕ ಸಭೆ ನಡೆಯುವ ಯೋಜನೆ ರೂಪಿಸಲಾಗಿದೆ. ಆದರೆ ದಿನಾಂಕ ನಿಗದಿಯಾಗಬೇಕಿದೆ ಎಂದರು.