ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ‘ಸಿದ್ದರಾಮಯ್ಯ ಹುಚ್ಚರು. ಪ್ರಕೃತಿ ಚಿಕಿತ್ಸಾಲಯದಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ ಅಂತಾರೆ. ಹೊರಬಂದು ಮುಂದಿನ ಮುಖ್ಯಮಂತ್ರಿ ತಾವೇ ಅಂತಾರೆ. ಚುನಾವಣೆ ನಂತರ ಕಾಂಗ್ರೆಸ್ ದಿಕ್ಕೆಟ್ಟು ಹೋಗಿದೆ. ನಾಯಕರನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಶಾಸಕರು ಕೊಲೆ ಮಾಡುವ ಮಟ್ಟಿಗೆ ಪರಿಸ್ಥಿತಿ ಬಂದಿದೆ. ಸಿದ್ದರಾಮಯ್ಯ ಸಮನ್ವಯ ಸಮಿತಿ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದು ಆಗ್ರಹಿಸಿದರು.