<p><strong>ಬೆಂಗಳೂರು:</strong> ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಗಳ 384 ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಮರು ಪರೀಕ್ಷೆಗೆ ಆದೇಶಿಸಲು, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್ಎಟಿ) ನಿರಾಕರಿಸಿದೆ.</p> <p>ಈ ಸಂಬಂಧ ಮಾಯಗಾನಹಳ್ಳಿಯ ಎಂ.ಕೃಷ್ಣ, ಕೋಲಾರದ ಡಿ.ಪವಿತ್ರಾ ಹಾಗೂ ಚಳ್ಳಕೆರೆಯ ಎಸ್.ರಮೇಶ್ ಸೇರಿದಂತೆ ಒಟ್ಟು 80 ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಂಗ ಸದಸ್ಯ ಎಸ್.ವೈ.ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್ ಅವರಿದ್ದ ದ್ವಿಸದಸ್ಯ ಪೀಠ ಪ್ರಕಟಿಸಿದೆ.</p> <p>‘ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಸಲ್ಲಿಸಿರುವ ಎಲ್ಲಾ ಅಂಶಗಳನ್ನು ಪರಿಶೀಲಿಸಿದ ಬಳಿಕ ಈಗಾಗಲೇ ಒಮ್ಮೆ ಪರೀಕ್ಷೆ ರದ್ದುಗೊಳಿಸಿ, ಮರು ಪೂರ್ವಭಾವಿ ಪರೀಕ್ಷೆ ನಡೆಸಲಾಗಿದೆ. ಈ ಹಂತದಲ್ಲಿ ಮರು ಪ್ರಾಥಮಿಕ ಪರೀಕ್ಷೆಗೆ ಆದೇಶಿಸಲು ಸಾಧ್ಯವಿಲ್ಲ. ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಆಗಿರುವ ಲೋಪಗಳ ಬಗ್ಗೆ ತಜ್ಞರ ಸಮಿತಿ ಮರು ಪರಿಶೀಲನೆ ನಡೆಸಿ ತೀರ್ಮಾನಿಸಬಹುದು’ ಎಂದು ಪೀಠವು ಆದೇಶದಲ್ಲಿ ವಿವರಿಸಿದೆ. ಈಗಾಗಲೇ ಕೆಪಿಎಸ್ಸಿ ನಿಗದಿಪಡಿಸಿರುವಂತೆ ಮುಖ್ಯ ಪರೀಕ್ಷೆಗಳು ಇದೇ 28ರಿಂದ ಆರಂಭವಾಗಬೇಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಗಳ 384 ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಮರು ಪರೀಕ್ಷೆಗೆ ಆದೇಶಿಸಲು, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್ಎಟಿ) ನಿರಾಕರಿಸಿದೆ.</p> <p>ಈ ಸಂಬಂಧ ಮಾಯಗಾನಹಳ್ಳಿಯ ಎಂ.ಕೃಷ್ಣ, ಕೋಲಾರದ ಡಿ.ಪವಿತ್ರಾ ಹಾಗೂ ಚಳ್ಳಕೆರೆಯ ಎಸ್.ರಮೇಶ್ ಸೇರಿದಂತೆ ಒಟ್ಟು 80 ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಂಗ ಸದಸ್ಯ ಎಸ್.ವೈ.ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್ ಅವರಿದ್ದ ದ್ವಿಸದಸ್ಯ ಪೀಠ ಪ್ರಕಟಿಸಿದೆ.</p> <p>‘ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಸಲ್ಲಿಸಿರುವ ಎಲ್ಲಾ ಅಂಶಗಳನ್ನು ಪರಿಶೀಲಿಸಿದ ಬಳಿಕ ಈಗಾಗಲೇ ಒಮ್ಮೆ ಪರೀಕ್ಷೆ ರದ್ದುಗೊಳಿಸಿ, ಮರು ಪೂರ್ವಭಾವಿ ಪರೀಕ್ಷೆ ನಡೆಸಲಾಗಿದೆ. ಈ ಹಂತದಲ್ಲಿ ಮರು ಪ್ರಾಥಮಿಕ ಪರೀಕ್ಷೆಗೆ ಆದೇಶಿಸಲು ಸಾಧ್ಯವಿಲ್ಲ. ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಆಗಿರುವ ಲೋಪಗಳ ಬಗ್ಗೆ ತಜ್ಞರ ಸಮಿತಿ ಮರು ಪರಿಶೀಲನೆ ನಡೆಸಿ ತೀರ್ಮಾನಿಸಬಹುದು’ ಎಂದು ಪೀಠವು ಆದೇಶದಲ್ಲಿ ವಿವರಿಸಿದೆ. ಈಗಾಗಲೇ ಕೆಪಿಎಸ್ಸಿ ನಿಗದಿಪಡಿಸಿರುವಂತೆ ಮುಖ್ಯ ಪರೀಕ್ಷೆಗಳು ಇದೇ 28ರಿಂದ ಆರಂಭವಾಗಬೇಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>