<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುತ್ತಿರುವ 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್ಎಟಿ) ಮಧ್ಯಂತರ ತಡೆ ನೀಡಿದೆ.</p>.<p>ಈ ಸಂಬಂಧ ಡಿ.ಪವಿತ್ರಾ ಸೇರಿದಂತೆ ಇತರೆ 51 ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೆಎಸ್ಎಟಿ ನ್ಯಾಯಾಂಗ ಸದಸ್ಯ ಎಸ್.ವೈ.ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್ ಅವರಿದ್ದ ಪೀಠವು ಈ ಕುರಿತಂತೆ ಆದೇಶಿಸಿದ್ದು, ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಿದೆ.</p>.<p>ಪೂರ್ವಭಾವಿ ಪರೀಕ್ಷಾ ಫಲಿತಾಂಶವನ್ನು 2025ರ ಜನವರಿ 30ರಂದು ಪ್ರಕಟಿಸಿ ನೇಮಕ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿದ್ದ ಕೆಎಸ್ಎಟಿ ಇದೀಗ ಮುಖ್ಯ ಪರೀಕ್ಷೆ ನಡೆಸಲು; ಆಯೋಗವು ಜನವರಿ 29ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಮುಂದಿನ ವಿಚಾರಣೆವರೆಗೆ ಅಮಾನತ್ತಿನಲ್ಲಿ ಇರಿಸುವಂತೆ ಆದೇಶಿಸಿದೆ.</p>.<p>‘ಈ ಹಿಂದಿನ ದೋಷಗಳನ್ನು ಸರಿಪಡಿಸದೆ ಮುಖ್ಯ ಪರೀಕ್ಷೆ ನಡೆಸಲು ಕೆಪಿಎಸ್ಸಿ ಹೇಗೆ ಅಧಿಸೂಚನೆ ಹೊರಡಿಸಿದೆ’ ಎಂದು ಪ್ರಶ್ನಿಸಿರುವ ಪೀಠವು, ‘ಇಂತಹ ಸನ್ನಿವೇಶದಲ್ಲಿ ಮುಖ್ಯ ಪರೀಕ್ಷೆಗೆ ಕೆಪಿಎಸ್ಸಿ ಹೊರಡಿಸಿರುವ ಅಧಿಸೂಚನೆಯನ್ನು ಅಮಾನತಿಯಲ್ಲಿ ಇರಿಸುವುದೇ ಸೂಕ್ತ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>‘ಮೇಲ್ನೋಟಕ್ಕೆ ಪ್ರಶ್ನೆಪತ್ರಿಕೆಗಳನ್ನು ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡುವಾಗ ದೋಷಗಳಾಗಿರುವುದು ಕಂಡು ಬಂದಿದೆ. ಆಯೋಗವೂ ಇದನ್ನು ಒಪ್ಪಿಕೊಂಡು ಆ ಬಗ್ಗೆ ಪರಿಶೀಲಿಸಲು ತಜ್ಞರ ಸಮಿತಿ ರಚನೆ ಮಾಡಿತ್ತು. ಅಂತೆಯೇ, ಸಮಿತಿ ನೀಡಿರುವ ವರದಿಯಲ್ಲಿ, ಪ್ರಶ್ನೆ ಪತ್ರಿಕೆ ಭಾಷಾಂತರದಲ್ಲಿ ದೋಷಗಳಾಗಿವೆ ಎಂಬುದನ್ನು ದೃಢಪಡಿಸಿದೆ. ಈ ವಿಚಾರವನ್ನು ಬಗೆಹರಿಸುವಂತೆಯೂ ಸಲಹೆ ನೀಡಿದೆ’ ಎಂಬ ಅಂಶವನ್ನು ಪೀಠವು ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುತ್ತಿರುವ 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್ಎಟಿ) ಮಧ್ಯಂತರ ತಡೆ ನೀಡಿದೆ.</p>.<p>ಈ ಸಂಬಂಧ ಡಿ.ಪವಿತ್ರಾ ಸೇರಿದಂತೆ ಇತರೆ 51 ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೆಎಸ್ಎಟಿ ನ್ಯಾಯಾಂಗ ಸದಸ್ಯ ಎಸ್.ವೈ.ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್ ಅವರಿದ್ದ ಪೀಠವು ಈ ಕುರಿತಂತೆ ಆದೇಶಿಸಿದ್ದು, ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಿದೆ.</p>.<p>ಪೂರ್ವಭಾವಿ ಪರೀಕ್ಷಾ ಫಲಿತಾಂಶವನ್ನು 2025ರ ಜನವರಿ 30ರಂದು ಪ್ರಕಟಿಸಿ ನೇಮಕ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿದ್ದ ಕೆಎಸ್ಎಟಿ ಇದೀಗ ಮುಖ್ಯ ಪರೀಕ್ಷೆ ನಡೆಸಲು; ಆಯೋಗವು ಜನವರಿ 29ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಮುಂದಿನ ವಿಚಾರಣೆವರೆಗೆ ಅಮಾನತ್ತಿನಲ್ಲಿ ಇರಿಸುವಂತೆ ಆದೇಶಿಸಿದೆ.</p>.<p>‘ಈ ಹಿಂದಿನ ದೋಷಗಳನ್ನು ಸರಿಪಡಿಸದೆ ಮುಖ್ಯ ಪರೀಕ್ಷೆ ನಡೆಸಲು ಕೆಪಿಎಸ್ಸಿ ಹೇಗೆ ಅಧಿಸೂಚನೆ ಹೊರಡಿಸಿದೆ’ ಎಂದು ಪ್ರಶ್ನಿಸಿರುವ ಪೀಠವು, ‘ಇಂತಹ ಸನ್ನಿವೇಶದಲ್ಲಿ ಮುಖ್ಯ ಪರೀಕ್ಷೆಗೆ ಕೆಪಿಎಸ್ಸಿ ಹೊರಡಿಸಿರುವ ಅಧಿಸೂಚನೆಯನ್ನು ಅಮಾನತಿಯಲ್ಲಿ ಇರಿಸುವುದೇ ಸೂಕ್ತ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>‘ಮೇಲ್ನೋಟಕ್ಕೆ ಪ್ರಶ್ನೆಪತ್ರಿಕೆಗಳನ್ನು ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡುವಾಗ ದೋಷಗಳಾಗಿರುವುದು ಕಂಡು ಬಂದಿದೆ. ಆಯೋಗವೂ ಇದನ್ನು ಒಪ್ಪಿಕೊಂಡು ಆ ಬಗ್ಗೆ ಪರಿಶೀಲಿಸಲು ತಜ್ಞರ ಸಮಿತಿ ರಚನೆ ಮಾಡಿತ್ತು. ಅಂತೆಯೇ, ಸಮಿತಿ ನೀಡಿರುವ ವರದಿಯಲ್ಲಿ, ಪ್ರಶ್ನೆ ಪತ್ರಿಕೆ ಭಾಷಾಂತರದಲ್ಲಿ ದೋಷಗಳಾಗಿವೆ ಎಂಬುದನ್ನು ದೃಢಪಡಿಸಿದೆ. ಈ ವಿಚಾರವನ್ನು ಬಗೆಹರಿಸುವಂತೆಯೂ ಸಲಹೆ ನೀಡಿದೆ’ ಎಂಬ ಅಂಶವನ್ನು ಪೀಠವು ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>