<p><strong>ಬೆಂಗಳೂರು</strong>: ‘ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಪದಾಧಿಕಾರಿಗಳ ಆಯ್ಕೆಗೆ ನಡೆಯುತ್ತಿರುವ ಚುನಾವಣೆಯ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳು ಯಾರೆಂಬುದನ್ನು ಸದ್ಯ ಪ್ರಕಟಿಸಬಾರದು’ ಎಂದು ಹೈಕೋರ್ಟ್ ಆದೇಶಿಸಿದೆ.</p>.<p>‘ಚುನಾವಣೆಯಲ್ಲಿ ನನ್ನನ್ನೂ ಅಭ್ಯರ್ಥಿಯನ್ನಾಗಿ ಪರಿಗಣಿಸಲು ನಿರ್ದೇಶಿಸಬೇಕು’ ಎಂದು ಕೋರಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಕೆ.ಎನ್.ಶಾಂತಕುಮಾರ್ ಅವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಎಸ್.ನಾಗಾನಂದ ಅವರ ವಾದ ಮಾನ್ಯ ಮಾಡಿದ ನ್ಯಾಯಪೀಠವು, ‘ನಾಮಪತ್ರ ಪರಿಶೀಲನೆ ಮತ್ತು ಅದನ್ನು ತಿರಸ್ಕರಿಸುವ ಮುನ್ನ ಅರ್ಜಿದಾರರು ₹200 ಚಂದಾ ಹಣ ಪಾವತಿಸಿದ್ದಾರೆಯೇ? ಹಣ ಪಾವತಿಸಿದ ವಿಚಾರವನ್ನು ಚುನಾವಣಾ ಅಧಿಕಾರಿ ಗಮನಕ್ಕೆ ತರಲಾಗಿದೆಯೇ? ಎಂಬ ಎರಡು ಸರಳ ಅಂಶಗಳನ್ನು ಖಾತರಿಪಡಿಸಿಕೊಳ್ಳಬೇಕಿದೆ. ಹಾಗಾಗಿ, ಈ ಸೀಮಿತ ವಿಚಾರಕ್ಕೆ ಸಂಬಂಧಿಸಿದಂತೆ ನಾಮಪತ್ರ ಪರಿಶೀಲನಾ ಪ್ರಕ್ರಿಯೆಯ ವಿಡಿಯೊ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ಕೆಎಸ್ಸಿಎಗೆ ನಿರ್ದೇಶಿಸಿತು.</p>.<p>‘ವಿಚಾರಣೆಯನ್ನು ಗುರುವಾರ (ನ. 27) ಬೆಳಿಗ್ಗೆ 10.30ಕ್ಕೆ ಆದ್ಯತೆ ನೀಡಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು’ ಎಂದು ಪೀಠವು ತಿಳಿಸಿತು.</p>.<p><strong>ಕೋರಿಕೆ ಏನು?</strong></p><p>ಡಿಸೆಂಬರ್ 7ರಂದು ನಡೆಯಲಿರುವ ಚುನಾವಣೆಯ ಪ್ರಕ್ರಿಯೆಯ ಭಾಗವಾಗಿ ಅರ್ಜಿದಾರರು ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ, ‘ಅವರ ಸದಸ್ಯತ್ವದ ಹಿಂಬಾಕಿ ಇದೆ’ ಎಂಬ ಕಾರಣಕ್ಕೆ ನಾಮಪತ್ರ ತಿರಸ್ಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಪದಾಧಿಕಾರಿಗಳ ಆಯ್ಕೆಗೆ ನಡೆಯುತ್ತಿರುವ ಚುನಾವಣೆಯ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳು ಯಾರೆಂಬುದನ್ನು ಸದ್ಯ ಪ್ರಕಟಿಸಬಾರದು’ ಎಂದು ಹೈಕೋರ್ಟ್ ಆದೇಶಿಸಿದೆ.</p>.<p>‘ಚುನಾವಣೆಯಲ್ಲಿ ನನ್ನನ್ನೂ ಅಭ್ಯರ್ಥಿಯನ್ನಾಗಿ ಪರಿಗಣಿಸಲು ನಿರ್ದೇಶಿಸಬೇಕು’ ಎಂದು ಕೋರಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಕೆ.ಎನ್.ಶಾಂತಕುಮಾರ್ ಅವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಎಸ್.ನಾಗಾನಂದ ಅವರ ವಾದ ಮಾನ್ಯ ಮಾಡಿದ ನ್ಯಾಯಪೀಠವು, ‘ನಾಮಪತ್ರ ಪರಿಶೀಲನೆ ಮತ್ತು ಅದನ್ನು ತಿರಸ್ಕರಿಸುವ ಮುನ್ನ ಅರ್ಜಿದಾರರು ₹200 ಚಂದಾ ಹಣ ಪಾವತಿಸಿದ್ದಾರೆಯೇ? ಹಣ ಪಾವತಿಸಿದ ವಿಚಾರವನ್ನು ಚುನಾವಣಾ ಅಧಿಕಾರಿ ಗಮನಕ್ಕೆ ತರಲಾಗಿದೆಯೇ? ಎಂಬ ಎರಡು ಸರಳ ಅಂಶಗಳನ್ನು ಖಾತರಿಪಡಿಸಿಕೊಳ್ಳಬೇಕಿದೆ. ಹಾಗಾಗಿ, ಈ ಸೀಮಿತ ವಿಚಾರಕ್ಕೆ ಸಂಬಂಧಿಸಿದಂತೆ ನಾಮಪತ್ರ ಪರಿಶೀಲನಾ ಪ್ರಕ್ರಿಯೆಯ ವಿಡಿಯೊ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ಕೆಎಸ್ಸಿಎಗೆ ನಿರ್ದೇಶಿಸಿತು.</p>.<p>‘ವಿಚಾರಣೆಯನ್ನು ಗುರುವಾರ (ನ. 27) ಬೆಳಿಗ್ಗೆ 10.30ಕ್ಕೆ ಆದ್ಯತೆ ನೀಡಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು’ ಎಂದು ಪೀಠವು ತಿಳಿಸಿತು.</p>.<p><strong>ಕೋರಿಕೆ ಏನು?</strong></p><p>ಡಿಸೆಂಬರ್ 7ರಂದು ನಡೆಯಲಿರುವ ಚುನಾವಣೆಯ ಪ್ರಕ್ರಿಯೆಯ ಭಾಗವಾಗಿ ಅರ್ಜಿದಾರರು ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ, ‘ಅವರ ಸದಸ್ಯತ್ವದ ಹಿಂಬಾಕಿ ಇದೆ’ ಎಂಬ ಕಾರಣಕ್ಕೆ ನಾಮಪತ್ರ ತಿರಸ್ಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>