<p><strong> ಬೆಂಗಳೂರು</strong>: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ) ಮತ್ತು ಭಾರತೀಯ ಮೀಸಲು ದಳ (ಐಆರ್ಬಿ) ನೇಮಕಾತಿಗೆ ಇರುವ ವಿದ್ಯಾರ್ಹತೆಯನ್ನು ಎಸ್ಎಸ್ಎಲ್ಸಿಯಿಂದ ಪಿಯುಸಿಗೆ ಏರಿಸುವ ವೃಂದ ಮತ್ತು ನೇಮಕಾತಿ ನಿಯಮಕ್ಕೆ ಮಾಡಿರುವ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<h2>ಸಚಿವ ಸಂಪುಟ ಸಭೆಯ ತೀರ್ಮಾನಗಳು:</h2>.<ul><li><p> ಕರ್ನಾಟಕ ನವೋದ್ಯಮ ನೀತಿ 2022–27ರ ಅಡಿ ಐದು ವರ್ಷಗಳ ಅವಧಿಗೆ ₹80 ಕೋಟಿ ಅನುದಾನ ಹಂಚಿಕೆಯೊಂದಿಗೆ ಒಟ್ಟು ಎಂಟು ಟೆಕ್ನಾಲಜಿ ಇನ್ಕ್ಯುಬೇಟರ್ 2.0 ಸ್ಥಾಪಿಸಲು ತೀರ್ಮಾನ.</p> </li><li><p>ಕಾರವಾರ, ಹಳೆ ಮಂಗಳೂರು(ಬೆಂಗ್ರೆ), ಹಳೆ ಮಂಗಳೂರು(ನಗರ ಬದಿ) ಮತ್ತು ಮಲ್ಪೆಯ ಬರ್ತ್ಗಳನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿ ನಿರ್ವಹಿಸಲು ತೀರ್ಮಾನ</p> </li><li><p>ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾಥಮಿಕ ಹಂತಕ್ಕಾಗಿ ₹23.25 ಕೋಟಿ ಮೊತ್ತದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ದುರಸ್ತಿ ಮತ್ತು ನವೀಕರಣ ಕಾಮಗಾರಿ</p> </li><li><p> ಕಾರವಾರ ಕ್ಯಾನ್ಸರ್ ಕೇರ್ ಘಟಕದ ಸ್ಥಾಪನೆಗೆ ಅಗತ್ಯವಿರುವ ಹೆಚ್ಚುವರಿ ಉಪಕರಣಗಳಿಗೆ ತಗಲುವ ಅನುದಾನವನ್ನು ಈಗಾಗಲೇ ಅನುಮೋದನೆ ಆಗಿರುವ ₹18.25 ಕೋಟಿ ಸರ್ಕಾರದ ವತಿಯಿಂದ ಭರಿಸಲಾಗುವುದು. ಇನ್ನುಳಿದ ಮೊತ್ತ ₹13.38 ಕೋಟಿಯನ್ನು ಸಂಸ್ಥೆಯ ಆಂತರಿಕ ಸಂಪನ್ಮೂಲದಿಂದ ಭರಿಸಲು ಒಪ್ಪಿಗೆ.</p> </li><li><p> ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕೇರ್ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಮೊದಲ ಹಂತದ ಉಪಕರಣಗಳ ಖರೀದಿಗೆ ₹50 ಕೋಟಿ.</p> </li><li><p>ಕೆ–ಶೋರ್ ಯೋಜನೆಗೆ ತಾಂತ್ರಿಕ ಮತ್ತು ನಿರ್ವಹಣಾ ಸಲಹೆಗಾರರ ಸೇವೆಗಳನ್ನು ಪಡೆಯಲು ₹20.47 ಕೋಟಿಗೆ ಆಡಳಿತಾತ್ಮಕ ಅನುಮೋದನೆ.</p> </li><li><p>ಯಾದಗಿರಿ ಜಿಲ್ಲೆ ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಕನಕಭವನ ನಿರ್ಮಾಣಕ್ಕೆ 300.14 ಚದರ ಮೀಟರ್ ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಉಚಿತವಾಗಿ ಮಂಜೂರು ಮಾಡಲು ತೀರ್ಮಾನ</p> </li><li><p> 2025–26 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ವಿವಿಧ ಮಾದರಿಯ 241 ವಾಹನಗಳನ್ನು ₹34.95 ಕೋಟಿ ವೆಚ್ಚದಲ್ಲಿ ಖರೀದಿಸಲು ಒಪ್ಪಿಗೆ</p> </li><li><p> ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ, ಉಡುಪಿ ಜಿಲ್ಲೆ ಅಂಜಾರು ಗ್ರಾಮ, ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಜಮೀನು ಮಂಜೂರು</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong> ಬೆಂಗಳೂರು</strong>: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ) ಮತ್ತು ಭಾರತೀಯ ಮೀಸಲು ದಳ (ಐಆರ್ಬಿ) ನೇಮಕಾತಿಗೆ ಇರುವ ವಿದ್ಯಾರ್ಹತೆಯನ್ನು ಎಸ್ಎಸ್ಎಲ್ಸಿಯಿಂದ ಪಿಯುಸಿಗೆ ಏರಿಸುವ ವೃಂದ ಮತ್ತು ನೇಮಕಾತಿ ನಿಯಮಕ್ಕೆ ಮಾಡಿರುವ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<h2>ಸಚಿವ ಸಂಪುಟ ಸಭೆಯ ತೀರ್ಮಾನಗಳು:</h2>.<ul><li><p> ಕರ್ನಾಟಕ ನವೋದ್ಯಮ ನೀತಿ 2022–27ರ ಅಡಿ ಐದು ವರ್ಷಗಳ ಅವಧಿಗೆ ₹80 ಕೋಟಿ ಅನುದಾನ ಹಂಚಿಕೆಯೊಂದಿಗೆ ಒಟ್ಟು ಎಂಟು ಟೆಕ್ನಾಲಜಿ ಇನ್ಕ್ಯುಬೇಟರ್ 2.0 ಸ್ಥಾಪಿಸಲು ತೀರ್ಮಾನ.</p> </li><li><p>ಕಾರವಾರ, ಹಳೆ ಮಂಗಳೂರು(ಬೆಂಗ್ರೆ), ಹಳೆ ಮಂಗಳೂರು(ನಗರ ಬದಿ) ಮತ್ತು ಮಲ್ಪೆಯ ಬರ್ತ್ಗಳನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿ ನಿರ್ವಹಿಸಲು ತೀರ್ಮಾನ</p> </li><li><p>ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾಥಮಿಕ ಹಂತಕ್ಕಾಗಿ ₹23.25 ಕೋಟಿ ಮೊತ್ತದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ದುರಸ್ತಿ ಮತ್ತು ನವೀಕರಣ ಕಾಮಗಾರಿ</p> </li><li><p> ಕಾರವಾರ ಕ್ಯಾನ್ಸರ್ ಕೇರ್ ಘಟಕದ ಸ್ಥಾಪನೆಗೆ ಅಗತ್ಯವಿರುವ ಹೆಚ್ಚುವರಿ ಉಪಕರಣಗಳಿಗೆ ತಗಲುವ ಅನುದಾನವನ್ನು ಈಗಾಗಲೇ ಅನುಮೋದನೆ ಆಗಿರುವ ₹18.25 ಕೋಟಿ ಸರ್ಕಾರದ ವತಿಯಿಂದ ಭರಿಸಲಾಗುವುದು. ಇನ್ನುಳಿದ ಮೊತ್ತ ₹13.38 ಕೋಟಿಯನ್ನು ಸಂಸ್ಥೆಯ ಆಂತರಿಕ ಸಂಪನ್ಮೂಲದಿಂದ ಭರಿಸಲು ಒಪ್ಪಿಗೆ.</p> </li><li><p> ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕೇರ್ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಮೊದಲ ಹಂತದ ಉಪಕರಣಗಳ ಖರೀದಿಗೆ ₹50 ಕೋಟಿ.</p> </li><li><p>ಕೆ–ಶೋರ್ ಯೋಜನೆಗೆ ತಾಂತ್ರಿಕ ಮತ್ತು ನಿರ್ವಹಣಾ ಸಲಹೆಗಾರರ ಸೇವೆಗಳನ್ನು ಪಡೆಯಲು ₹20.47 ಕೋಟಿಗೆ ಆಡಳಿತಾತ್ಮಕ ಅನುಮೋದನೆ.</p> </li><li><p>ಯಾದಗಿರಿ ಜಿಲ್ಲೆ ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಕನಕಭವನ ನಿರ್ಮಾಣಕ್ಕೆ 300.14 ಚದರ ಮೀಟರ್ ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಉಚಿತವಾಗಿ ಮಂಜೂರು ಮಾಡಲು ತೀರ್ಮಾನ</p> </li><li><p> 2025–26 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ವಿವಿಧ ಮಾದರಿಯ 241 ವಾಹನಗಳನ್ನು ₹34.95 ಕೋಟಿ ವೆಚ್ಚದಲ್ಲಿ ಖರೀದಿಸಲು ಒಪ್ಪಿಗೆ</p> </li><li><p> ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ, ಉಡುಪಿ ಜಿಲ್ಲೆ ಅಂಜಾರು ಗ್ರಾಮ, ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಜಮೀನು ಮಂಜೂರು</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>