<p><strong>ಹುಬ್ಬಳ್ಳಿ/ಕಲಬುರ್ಗಿ:</strong> ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದಈಶಾನ್ಯ ಸಾರಿಗೆ ಸಂಸ್ಥೆ ಮತ್ತುವಾಯವ್ಯ ರಸ್ತೆ ಸಾರಿಗೆಸಂಸ್ಥೆ ವ್ಯಾಪ್ತಿಯ ಹಲವು ಮಾರ್ಗಗಳ ಬಸ್ ಸಂಚಾರ ಸ್ಥಗಿತಗೊಂಡಿದೆ.</p>.<p>ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಹುಬ್ಬಳ್ಳಿ- ಕಾರವಾರ, ಶಿರಸಿ- ಸಿದ್ದಾಪುರ, ಶಿರಸಿ- ಅಂಕೋಲಾ, ಬೆಳಗಾವಿ- ಗೋವಾ, ಬೆಳಗಾವಿ- ಕೊಲ್ಹಾಪುರ, ಬೆಳಗಾವಿ- ವಿಜಯಪುರ, ಜಮಖಂಡಿ- ವಿಜಯಪುರ ಹಾಗೂ ಜಮಖಂಡಿ- ಮೀರಜ್ ಮಾರ್ಗಗಳಲ್ಲಿ ವಾಹನಗಳು ಸಂಚರಿಸಿತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ</p>.<p>ಹುಬ್ಬಳ್ಳಿ–ಧಾರವಾಡದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ಆ ಭಾಗಕ್ಕೆ ತೆರಳಬೇಕಿದ್ದ ಬಸ್ಸುಗಳು ಹಾಗೂಮಹಾರಾಷ್ಟ್ರದ ಕೊಲ್ಹಾಪುರ, ಪುಣೆ, ಮಿರಜ್, ರಾಜ್ಯದ ಬೆಳಗಾವಿ, ನಿಪ್ಪಾಣಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮಾರ್ಗಗಳಲ್ಲಿ ತೆರಳಬೇಕಿದ್ದ ಬಸ್ಗಳ ಸಂಚಾರವನ್ನು ರದ್ದುಪಡಿಸಲಾಗಿದೆ.</p>.<p>ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ವಿಭಾಗದಲ್ಲಿ ಒಟ್ಟು85 ಅನುಸೂಚಿಗಳಲ್ಲಿನ ಸಂಚಾರವನ್ನು ರದ್ದು ಮಾಡಲಾಗಿದೆ.</p>.<p>ಕಲಬುರ್ಗಿ–ದಾವಣಗೆರೆ ಮಧ್ಯೆ ಸಂಚರಿಸುವ ಒಂದು ಸ್ಲೀಪರ್ ಬಸ್ ಸಹ ಇದರಲ್ಲಿ ಸೇರಿದೆ. ನಿತ್ಯ ಈ ಅನುಸೂಚಿಗಳಲ್ಲಿ 51 ಸಾವಿರ ಕಿ.ಮೀ. ದೂರವನ್ನು ಸಂಸ್ಥೆಯ ಬಸ್ಗಳು ಸಂಚರಿಸುತ್ತಿದ್ದವು. ನಾಲ್ಕೈದು ದಿನಗಳಿಂದ ಈ ಅನುಸೂಚಿಗಳನ್ನು ರದ್ದುಪಡಿಸಲಾಗಿದ್ದು, ಇದರಿಂದಾಗಿ ನಿತ್ಯ ₹ 13ರಿಂದ ₹ 14 ಲಕ್ಷ ನಷ್ಟ ಸಂಭವಿಸುತ್ತಿವೆ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸತತವಾಗಿ ಮಳೆ ಸುರಿಯುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಸ್ ಚಾಲಕರು ಹಾಗೂ ನಿರ್ವಾಹಕರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ಸಂಸ್ಥೆಯ ವ್ಯಾಪ್ತಿಯ ಬಳ್ಳಾರಿ, ಕೊಪ್ಪಳ, ಕಲಬುರ್ಗಿ, ಯಾದಗಿರಿ, ರಾಯಚೂರು ಹಾಗೂ ಬೀದರ್ ವಿಭಾಗಗಳಿಂದ ಈ ನಗರಗಳತ್ತ ತೆರಳುವ ಬಸ್ಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಮಳೆ ಹಾಗೂ ಪ್ರವಾಹದ ನೀರು ಇಳಿದರೆ ಮತ್ತೆ ಆರಂಭಿಸುತ್ತೇವೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ/ಕಲಬುರ್ಗಿ:</strong> ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದಈಶಾನ್ಯ ಸಾರಿಗೆ ಸಂಸ್ಥೆ ಮತ್ತುವಾಯವ್ಯ ರಸ್ತೆ ಸಾರಿಗೆಸಂಸ್ಥೆ ವ್ಯಾಪ್ತಿಯ ಹಲವು ಮಾರ್ಗಗಳ ಬಸ್ ಸಂಚಾರ ಸ್ಥಗಿತಗೊಂಡಿದೆ.</p>.<p>ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಹುಬ್ಬಳ್ಳಿ- ಕಾರವಾರ, ಶಿರಸಿ- ಸಿದ್ದಾಪುರ, ಶಿರಸಿ- ಅಂಕೋಲಾ, ಬೆಳಗಾವಿ- ಗೋವಾ, ಬೆಳಗಾವಿ- ಕೊಲ್ಹಾಪುರ, ಬೆಳಗಾವಿ- ವಿಜಯಪುರ, ಜಮಖಂಡಿ- ವಿಜಯಪುರ ಹಾಗೂ ಜಮಖಂಡಿ- ಮೀರಜ್ ಮಾರ್ಗಗಳಲ್ಲಿ ವಾಹನಗಳು ಸಂಚರಿಸಿತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ</p>.<p>ಹುಬ್ಬಳ್ಳಿ–ಧಾರವಾಡದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ಆ ಭಾಗಕ್ಕೆ ತೆರಳಬೇಕಿದ್ದ ಬಸ್ಸುಗಳು ಹಾಗೂಮಹಾರಾಷ್ಟ್ರದ ಕೊಲ್ಹಾಪುರ, ಪುಣೆ, ಮಿರಜ್, ರಾಜ್ಯದ ಬೆಳಗಾವಿ, ನಿಪ್ಪಾಣಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮಾರ್ಗಗಳಲ್ಲಿ ತೆರಳಬೇಕಿದ್ದ ಬಸ್ಗಳ ಸಂಚಾರವನ್ನು ರದ್ದುಪಡಿಸಲಾಗಿದೆ.</p>.<p>ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ವಿಭಾಗದಲ್ಲಿ ಒಟ್ಟು85 ಅನುಸೂಚಿಗಳಲ್ಲಿನ ಸಂಚಾರವನ್ನು ರದ್ದು ಮಾಡಲಾಗಿದೆ.</p>.<p>ಕಲಬುರ್ಗಿ–ದಾವಣಗೆರೆ ಮಧ್ಯೆ ಸಂಚರಿಸುವ ಒಂದು ಸ್ಲೀಪರ್ ಬಸ್ ಸಹ ಇದರಲ್ಲಿ ಸೇರಿದೆ. ನಿತ್ಯ ಈ ಅನುಸೂಚಿಗಳಲ್ಲಿ 51 ಸಾವಿರ ಕಿ.ಮೀ. ದೂರವನ್ನು ಸಂಸ್ಥೆಯ ಬಸ್ಗಳು ಸಂಚರಿಸುತ್ತಿದ್ದವು. ನಾಲ್ಕೈದು ದಿನಗಳಿಂದ ಈ ಅನುಸೂಚಿಗಳನ್ನು ರದ್ದುಪಡಿಸಲಾಗಿದ್ದು, ಇದರಿಂದಾಗಿ ನಿತ್ಯ ₹ 13ರಿಂದ ₹ 14 ಲಕ್ಷ ನಷ್ಟ ಸಂಭವಿಸುತ್ತಿವೆ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸತತವಾಗಿ ಮಳೆ ಸುರಿಯುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಸ್ ಚಾಲಕರು ಹಾಗೂ ನಿರ್ವಾಹಕರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ಸಂಸ್ಥೆಯ ವ್ಯಾಪ್ತಿಯ ಬಳ್ಳಾರಿ, ಕೊಪ್ಪಳ, ಕಲಬುರ್ಗಿ, ಯಾದಗಿರಿ, ರಾಯಚೂರು ಹಾಗೂ ಬೀದರ್ ವಿಭಾಗಗಳಿಂದ ಈ ನಗರಗಳತ್ತ ತೆರಳುವ ಬಸ್ಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಮಳೆ ಹಾಗೂ ಪ್ರವಾಹದ ನೀರು ಇಳಿದರೆ ಮತ್ತೆ ಆರಂಭಿಸುತ್ತೇವೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>