<p><strong>ಬೆಂಗಳೂರು</strong>: ಕೆಎಸ್ಆರ್ಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ ಮೊದಲ ಬಾರಿಗೆ ₹10 ಲಕ್ಷ ಅಪಘಾತ ಪರಿಹಾರ ಚೆಕ್ ಅನ್ನು ಸೋಮವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್ಆರ್ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ವಿತರಿಸಿದರು.</p>.<p>ಪ್ರಯಾಣಿಕರಿಗೆ ಅಪಘಾತ ಪರಿಹಾರ ವಿಮೆ ₹3 ಲಕ್ಷ ಇತ್ತು. ಕಳೆದ ಜ.1ರಿಂದ ಈ ಮೊತ್ತವನ್ನು ₹10 ಲಕ್ಷಕ್ಕೆ ಏರಿಸಲಾಗಿತ್ತು. ಫೆ.4ರಂದು ಹಾಸನ ವಿಭಾಗ ಚನ್ನರಾಯಪಟ್ಟಣ ಘಟಕದ ಬಸ್ ಸಕಲೇಶಪುರ ಸಮೀಪದ ಬಾಗೆ ಎಂಬಲ್ಲಿ ಅಪಘಾತಕ್ಕೆ ಈಡಾಗಿತ್ತು. ಪ್ರಯಾಣಿಕ ಜಿ.ಎನ್. ಅಮೃತ್(34) ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಅವರ ತಂದೆಗೆ ಸೋಮವಾರ ₹ 10 ಲಕ್ಷದ ಚೆಕ್ ವಿತರಿಸಲಾಯಿತು.</p>.<p>ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕಿ (ಸಿಬ್ಬಂದಿ ಮತ್ತು ಜಾಗೃತೆ) ನಂದಿನಿ ದೇವಿ, ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಎಸ್ಆರ್ಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ ಮೊದಲ ಬಾರಿಗೆ ₹10 ಲಕ್ಷ ಅಪಘಾತ ಪರಿಹಾರ ಚೆಕ್ ಅನ್ನು ಸೋಮವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್ಆರ್ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ವಿತರಿಸಿದರು.</p>.<p>ಪ್ರಯಾಣಿಕರಿಗೆ ಅಪಘಾತ ಪರಿಹಾರ ವಿಮೆ ₹3 ಲಕ್ಷ ಇತ್ತು. ಕಳೆದ ಜ.1ರಿಂದ ಈ ಮೊತ್ತವನ್ನು ₹10 ಲಕ್ಷಕ್ಕೆ ಏರಿಸಲಾಗಿತ್ತು. ಫೆ.4ರಂದು ಹಾಸನ ವಿಭಾಗ ಚನ್ನರಾಯಪಟ್ಟಣ ಘಟಕದ ಬಸ್ ಸಕಲೇಶಪುರ ಸಮೀಪದ ಬಾಗೆ ಎಂಬಲ್ಲಿ ಅಪಘಾತಕ್ಕೆ ಈಡಾಗಿತ್ತು. ಪ್ರಯಾಣಿಕ ಜಿ.ಎನ್. ಅಮೃತ್(34) ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಅವರ ತಂದೆಗೆ ಸೋಮವಾರ ₹ 10 ಲಕ್ಷದ ಚೆಕ್ ವಿತರಿಸಲಾಯಿತು.</p>.<p>ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕಿ (ಸಿಬ್ಬಂದಿ ಮತ್ತು ಜಾಗೃತೆ) ನಂದಿನಿ ದೇವಿ, ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>