ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ನಮಗೆ ಹಸಿವಾಗಿದೆ. ಕುಟುಂಬ ನಿರ್ವಹಣೆ ಕಷ್ಟ ಆಗುತ್ತಿದೆ. ವೇತನ ಹೆಚ್ಚು ಮಾಡಿ ಎಂದು ಕೇಳಿದರೆ ಹೇಗೆ ದುರುದ್ದೇಶ ಆಗುತ್ತದೆ? ಸಾರಿಗೆ ನೌಕರರನ್ನು ಸರ್ಕಾರ ಏಕೆ ಕಡೆಗಣಿಸುತ್ತಿದೆ? ಆ ಇಲಾಖೆ ನಿರ್ನಾಮ ಮಾಡಿ ಖಾಸಗಿಯವರಿಗೆ ಕೊಡುವ ತರಾತುರಿಯಲ್ಲಿ ಇದ್ದಾರಾ? ಏನು ನಿಮ್ಮ ವಾದ? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.