<p><strong>ಮುಳಬಾಗಿಲು</strong>: ಓಂ ಶಕ್ತಿ ದೇವಾಲಯಕ್ಕೆ ತೆರಳಿದ್ದ ಭಕ್ತರು ಇದ್ದ ksrtc ಬಸ್ಸು ಹಾಗೂ ಕ್ಯಾಂಟರ್ ಸರಕು ವಾಹನದ ನಡುವೆ ತಮಿಳುನಾಡಿನ ರಾಣಿಪೇಟ ಬಳಿ ಬುಧವಾರ ಮಧ್ಯರಾತ್ರಿ ಅಪಘಾತ ಸಂಭವಿಸಿ ಟೆಂಪೊದಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಬಸ್ಸಿನಲ್ಲಿದ್ದವರು ಗಾಯಗೊಂಡಿದ್ದಾರೆ.</p><p>ಟೆಂಪೊದಲ್ಲಿದ್ದ ಶ್ರೀನಿವಾಸಪುರ ತಾಲ್ಲೂಕಿನ ಸೀಗೇಹಳ್ಳಿಯ ಮಂಜುನಾಥ್, ಶಂಕರ್, ಸೋಮಶೇಖರ್ ಹಾಗೂ ಕೃಷ್ಣಪ್ಪ ಮೃತರು. ಇವರು ಕ್ಯಾಂಟರ್ನಲ್ಲಿ ಚೆನ್ನೈ ಮಾರುಕಟ್ಟೆಗೆ ತರಕಾರಿ ಕೊಂಡೊಯ್ಯುತ್ತಿದ್ದರು.</p><p>ಬುಧವಾರ ಬೆಳಿಗ್ಗೆ ಮುಳಬಾಗಿಲು ತಾಲ್ಲೂಕಿನ ನಲ್ಲೂರು ಗ್ರಾಮದಿಂದ 50 ಮಂದಿ ಓಂ ಶಕ್ತಿ ಭಕ್ತರನ್ನು ಒಳಗೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ತಮಿಳುನಾಡಿನ ಮೇಲ್ ಮರವತ್ತೂರಿಗೆ ತೆರಳಿತ್ತು. ವಾಪಸ್ ಬರುತ್ತಿದ್ದ ವೇಳೆ ತಮಿಳುನಾಡಿನ ರಾಣಿಪೇಟ ಬಳಿ ಕ್ಯಾಂಟರ್ಗೆ ಗುದ್ದಿದೆ.</p>.<p>ಬುಧವಾರ ರಾತ್ರಿ ಸುಮಾರು 12 ಗಂಟೆಯ ಸಮಯದಲ್ಲಿ ಬಸ್ಸಿನಲ್ಲಿದ್ದವರೆಲ್ಲರೂ ಗಾಢ ನಿದ್ರೆಯಲ್ಲಿದ್ದಾಗ ಈ ಅವಘಡ ನಡೆದಿದೆ. ಬಸ್ಸಿನ ಚಾಲಕ ಕೋಲಾರ ತಾಲ್ಲೂಕಿನ ನೆರ್ನಹಳ್ಳಿಯ ಬಾಬು ಹಾಗೂ ಮುಳಬಾಗಿಲು ತಾಲ್ಲೂಕು ನಲ್ಲೂರು ಗ್ರಾಮದ ಸರಸ್ವತಮ್ಮ ಅವರಿಗೆ ಗಂಭೀರವಾಗಿ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಬಸ್ಸಿನಲ್ಲಿದ್ದ ಐವತ್ತು ಮಂದಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ತಮಿಳುನಾಡಿನ ವೇಲೂರು ಸಿ.ಎಂ.ಸಿ ಆಸ್ಪತ್ರೆ ಹಾಗೂ ರತ್ನಗಿರಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಿಳುನಾಡಿನ ರಾಣಿಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಗುರುವಾರ ಬೆಳಿಗ್ಗೆ ಏಳು ಗಂಟೆಗೆ ಸರಿಯಾಗಿ ನಲ್ಲೂರು ಗ್ರಾಮಕ್ಕೆ ವಾಪಸ್ ಬರಬೇಕೆಂಬ ಉದ್ದೇಶದಿಂದ ಚಾಲಕ ಬಸ್ಸನ್ನು ವೇಗವಾಗಿ ಚಲಾಯಿಸುತ್ತಿದ್ದರು ಎಂಬುದು ತಿಳಿದುಬಂದಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ಓಂ ಶಕ್ತಿ ದೇವಾಲಯಕ್ಕೆ ತೆರಳಿದ್ದ ಭಕ್ತರು ಇದ್ದ ksrtc ಬಸ್ಸು ಹಾಗೂ ಕ್ಯಾಂಟರ್ ಸರಕು ವಾಹನದ ನಡುವೆ ತಮಿಳುನಾಡಿನ ರಾಣಿಪೇಟ ಬಳಿ ಬುಧವಾರ ಮಧ್ಯರಾತ್ರಿ ಅಪಘಾತ ಸಂಭವಿಸಿ ಟೆಂಪೊದಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಬಸ್ಸಿನಲ್ಲಿದ್ದವರು ಗಾಯಗೊಂಡಿದ್ದಾರೆ.</p><p>ಟೆಂಪೊದಲ್ಲಿದ್ದ ಶ್ರೀನಿವಾಸಪುರ ತಾಲ್ಲೂಕಿನ ಸೀಗೇಹಳ್ಳಿಯ ಮಂಜುನಾಥ್, ಶಂಕರ್, ಸೋಮಶೇಖರ್ ಹಾಗೂ ಕೃಷ್ಣಪ್ಪ ಮೃತರು. ಇವರು ಕ್ಯಾಂಟರ್ನಲ್ಲಿ ಚೆನ್ನೈ ಮಾರುಕಟ್ಟೆಗೆ ತರಕಾರಿ ಕೊಂಡೊಯ್ಯುತ್ತಿದ್ದರು.</p><p>ಬುಧವಾರ ಬೆಳಿಗ್ಗೆ ಮುಳಬಾಗಿಲು ತಾಲ್ಲೂಕಿನ ನಲ್ಲೂರು ಗ್ರಾಮದಿಂದ 50 ಮಂದಿ ಓಂ ಶಕ್ತಿ ಭಕ್ತರನ್ನು ಒಳಗೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ತಮಿಳುನಾಡಿನ ಮೇಲ್ ಮರವತ್ತೂರಿಗೆ ತೆರಳಿತ್ತು. ವಾಪಸ್ ಬರುತ್ತಿದ್ದ ವೇಳೆ ತಮಿಳುನಾಡಿನ ರಾಣಿಪೇಟ ಬಳಿ ಕ್ಯಾಂಟರ್ಗೆ ಗುದ್ದಿದೆ.</p>.<p>ಬುಧವಾರ ರಾತ್ರಿ ಸುಮಾರು 12 ಗಂಟೆಯ ಸಮಯದಲ್ಲಿ ಬಸ್ಸಿನಲ್ಲಿದ್ದವರೆಲ್ಲರೂ ಗಾಢ ನಿದ್ರೆಯಲ್ಲಿದ್ದಾಗ ಈ ಅವಘಡ ನಡೆದಿದೆ. ಬಸ್ಸಿನ ಚಾಲಕ ಕೋಲಾರ ತಾಲ್ಲೂಕಿನ ನೆರ್ನಹಳ್ಳಿಯ ಬಾಬು ಹಾಗೂ ಮುಳಬಾಗಿಲು ತಾಲ್ಲೂಕು ನಲ್ಲೂರು ಗ್ರಾಮದ ಸರಸ್ವತಮ್ಮ ಅವರಿಗೆ ಗಂಭೀರವಾಗಿ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಬಸ್ಸಿನಲ್ಲಿದ್ದ ಐವತ್ತು ಮಂದಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ತಮಿಳುನಾಡಿನ ವೇಲೂರು ಸಿ.ಎಂ.ಸಿ ಆಸ್ಪತ್ರೆ ಹಾಗೂ ರತ್ನಗಿರಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಿಳುನಾಡಿನ ರಾಣಿಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಗುರುವಾರ ಬೆಳಿಗ್ಗೆ ಏಳು ಗಂಟೆಗೆ ಸರಿಯಾಗಿ ನಲ್ಲೂರು ಗ್ರಾಮಕ್ಕೆ ವಾಪಸ್ ಬರಬೇಕೆಂಬ ಉದ್ದೇಶದಿಂದ ಚಾಲಕ ಬಸ್ಸನ್ನು ವೇಗವಾಗಿ ಚಲಾಯಿಸುತ್ತಿದ್ದರು ಎಂಬುದು ತಿಳಿದುಬಂದಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>