‘ಉತ್ತಮ ಸ್ಥಿತಿಯಲ್ಲಿರುವ ಚಾಸಿಗಳನ್ನು ಹರಾಜು ಹಾಕಿ, ಸಂಸ್ಥೆಗೆ ಭಾರಿ ನಷ್ಟ ಮಾಡಲಾಗಿದೆ’ ಎಂದು ಆರೋಪಿಸಿ ‘ಕಮಿಟಿ ಫಾರ್ ಹ್ಯೂಮನ್ ರೈಟ್ಸ್ ಇರಾಡಿಕೇಟಿಂಗ್ ಕರಪ್ಷನ್’ ದೂರು ನೀಡಿತ್ತು. ತನಿಖೆ ಆರಂಭವಾಗಿ ಮೂರು ವರ್ಷ ಕಳೆದಿದ್ದರೂ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲು ಸಾಧ್ಯವಾಗಿಲ್ಲ.ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರೇ ತನಿಖೆಯ ಪ್ರಗತಿ ಪರಿಶೀಲಿಸಿದ್ದಾರೆ. ತಿಂಗಳೊಳಗೆ ದೋಷಾರೋಪ ಪಟ್ಟಿ ಸಲ್ಲಿಸುವಂತೆ ಪೊಲೀಸ್ ವಿಭಾಗಕ್ಕೆ ತಾಕೀತು ಮಾಡಿದ್ದಾರೆ.ಗಡುವು ಮುಗಿದು 2 ತಿಂಗಳು ಕಳೆದರೂ ತನಿಖೆ ಪೂರ್ಣಗೊಂಡಿಲ್ಲ. ಅಧಿಕಾರಿಗಳ ಅಸಹಕಾರ ದಿಂದಾಗಿ ವಿಳಂಬವಾಗುತ್ತಿದೆ ಎಂದು ಲೋಕಾಯುಕ್ತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.