<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘ಕೆಎಸ್ಆರ್ಟಿಸಿ ಆರೋಗ್ಯ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದರು. ಆ ಮೂಲಕ, ಸಾರಿಗೆ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.</p>.<p>ಸುಮಾರು 34 ಸಾವಿರ ಸಿಬ್ಬಂದಿ ಮತ್ತು ಅವರ ಅವಲಂಬಿತರು (ಅಂದಾಜು 1.50 ಲಕ್ಷ) ಈ ಯೋಜನೆಗೆ ಅರ್ಹರಾಗಲಿದ್ದಾರೆ.</p>.<p>ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಈ ಯೋಜನೆಯಡಿ ಒಡಂಬಡಿಕೆ ಮಾಡಿಕೊಂಡಿರುವ ಎಲ್ಲ ಆಸ್ಪತ್ರೆಗಳು ಕೆಎಸ್ಆರ್ಟಿಸಿ ನೌಕರರು ಮತ್ತು ಕುಟುಂಬದವರು ಆಸ್ಪತ್ರೆಗೆ ಬಂದಾಗ ಗೌರವಯುತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆ ನೀಡಬೇಕು’ ಎಂದರು.</p>.<p>‘ಸದ್ಯ ಕೆಎಸ್ಆರ್ಟಿಸಿ ಮಾತ್ರ ಈ ಯೋಜನೆಯನ್ನು ಜಾರಿಗೆ ತಂದಿದೆ. ಉಳಿದ ನಿಗಮಗಳು ಮೂರು ತಿಂಗಳ ಒಳಗೆ ಜಾರಿಗೆ ತರಲಿವೆ’ ಎಂದರು.</p>.<p>ಇದೇ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಟ್ರಸ್ಟ್ಗೆ ₹ 20 ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದ ಮುಖ್ಯಮಂತ್ರಿ, ಬಳಿಕ ನಿಗಮದ ಆಂತರಿಕ ನಿಯತಕಾಲಿಕ ‘ಸಾರಿಗೆ ಸಂಪದ’ ಸಂಚಿಕೆ ಮತ್ತು ಕೆಎಸ್ಆರ್ಟಿಸಿ ಆರೋಗ್ಯ ಕೈಪಿಡಿ ಬಿಡುಗಡೆ ಮಾಡಿದರು.</p>.<p>ನೌಕರರ ಕನಸು ನನಸಾದ ದಿನ: ‘ಸುಮಾರು 20 ವರ್ಷಗಳಿಂದ ಈ ವಿಚಾರವಾಗಿ ಬೇಡಿಕೆ ಇತ್ತು. ಅನೇಕ ನೌಕರರ ಕನಸು ನನಸಾಗಿದೆ. ಸದ್ಯ 250 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಇನ್ನೂ 50 ಆಸ್ಪತ್ರೆಗಳನ್ನು ಸೇರ್ಪಡೆ ಮಾಡಲಾಗುವುದು’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.</p>.<p>ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್, ‘ಕೆಎಸ್ಆರ್ಟಿಸಿ ಆರೋಗ್ಯ ಕಾರ್ಡ್ಗಾಗಿ ನೌಕರರು ಪ್ರತಿ ತಿಂಗಳು ₹ 650 ಪಾವತಿ ಮಾಡಬೇಕು. ಕೆಎಸ್ಆರ್ಟಿಸಿ ₹ 600 ಪಾವತಿ ಮಾಡಲಿದೆ. ಇದರಿಂದ ವರ್ಷಕ್ಕೆ ಒಟ್ಟು ₹ 46 ಕೋಟಿ ಸಂಗ್ರಹ ಆಗಲಿದೆ. ಈ ಹಿಂದೆ ನೌಕರರ ಆರೋಗ್ಯಕ್ಕಾಗಿ ಕೆಎಸ್ಆರ್ಟಿಸಿ ಪ್ರತಿವರ್ಷ ₹ 16 ಕೋಟಿ ವೆಚ್ಚ ಮಾಡುತ್ತಿತ್ತು’ ಎಂದರು.</p>.<h2>ಏನೇನು ಸೌಲಭ್ಯ?</h2><h2></h2><p>lಸರ್ಕಾರಿ, ಖಾಸಗಿ ಸೇರಿ 250 ಆಸ್ಪತ್ರೆಗಳಲ್ಲಿ ಆರೋಗ್ಯ ಕಾರ್ಡ್ ಬಳಸಿ ನಗದುರಹಿತ ಚಿಕಿತ್ಸೆ</p><p>lಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ, ಸಾಮಾನ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯ</p><p>l ಯಾವುದೇ ಕಾಯಿಲೆಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ</p><p>l ನೌಕರರ ಮನೆಯ ಆರು ಜನರು ಆರೋಗ್ಯ ಕಾರ್ಡ್ ಬಳಸಿ ಚಿಕಿತ್ಸೆ ಪಡೆಯಬಹುದು</p><p>l ನೌಕರರು ನಿವೃತ್ತಿ ಆಗುವವರೆಗೂ ಸೌಲಭ್ಯ</p><p>l ಕಣ್ಣು ಮತ್ತು ದಂತ ಚಿಕಿತ್ಸಾ ವೆಚ್ಚವೂ ಲಭ್ಯ</p><p>l ಆಯುರ್ವೇದ, ಪ್ರಕೃತಿ, ಯುನಾನಿ ಮತ್ತು ಹೋಮಿಯೋಪತಿ ಚಿಕಿತ್ಸೆಗಳೂ ಸಿಗಲಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘ಕೆಎಸ್ಆರ್ಟಿಸಿ ಆರೋಗ್ಯ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದರು. ಆ ಮೂಲಕ, ಸಾರಿಗೆ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.</p>.<p>ಸುಮಾರು 34 ಸಾವಿರ ಸಿಬ್ಬಂದಿ ಮತ್ತು ಅವರ ಅವಲಂಬಿತರು (ಅಂದಾಜು 1.50 ಲಕ್ಷ) ಈ ಯೋಜನೆಗೆ ಅರ್ಹರಾಗಲಿದ್ದಾರೆ.</p>.<p>ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಈ ಯೋಜನೆಯಡಿ ಒಡಂಬಡಿಕೆ ಮಾಡಿಕೊಂಡಿರುವ ಎಲ್ಲ ಆಸ್ಪತ್ರೆಗಳು ಕೆಎಸ್ಆರ್ಟಿಸಿ ನೌಕರರು ಮತ್ತು ಕುಟುಂಬದವರು ಆಸ್ಪತ್ರೆಗೆ ಬಂದಾಗ ಗೌರವಯುತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆ ನೀಡಬೇಕು’ ಎಂದರು.</p>.<p>‘ಸದ್ಯ ಕೆಎಸ್ಆರ್ಟಿಸಿ ಮಾತ್ರ ಈ ಯೋಜನೆಯನ್ನು ಜಾರಿಗೆ ತಂದಿದೆ. ಉಳಿದ ನಿಗಮಗಳು ಮೂರು ತಿಂಗಳ ಒಳಗೆ ಜಾರಿಗೆ ತರಲಿವೆ’ ಎಂದರು.</p>.<p>ಇದೇ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಟ್ರಸ್ಟ್ಗೆ ₹ 20 ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದ ಮುಖ್ಯಮಂತ್ರಿ, ಬಳಿಕ ನಿಗಮದ ಆಂತರಿಕ ನಿಯತಕಾಲಿಕ ‘ಸಾರಿಗೆ ಸಂಪದ’ ಸಂಚಿಕೆ ಮತ್ತು ಕೆಎಸ್ಆರ್ಟಿಸಿ ಆರೋಗ್ಯ ಕೈಪಿಡಿ ಬಿಡುಗಡೆ ಮಾಡಿದರು.</p>.<p>ನೌಕರರ ಕನಸು ನನಸಾದ ದಿನ: ‘ಸುಮಾರು 20 ವರ್ಷಗಳಿಂದ ಈ ವಿಚಾರವಾಗಿ ಬೇಡಿಕೆ ಇತ್ತು. ಅನೇಕ ನೌಕರರ ಕನಸು ನನಸಾಗಿದೆ. ಸದ್ಯ 250 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಇನ್ನೂ 50 ಆಸ್ಪತ್ರೆಗಳನ್ನು ಸೇರ್ಪಡೆ ಮಾಡಲಾಗುವುದು’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.</p>.<p>ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್, ‘ಕೆಎಸ್ಆರ್ಟಿಸಿ ಆರೋಗ್ಯ ಕಾರ್ಡ್ಗಾಗಿ ನೌಕರರು ಪ್ರತಿ ತಿಂಗಳು ₹ 650 ಪಾವತಿ ಮಾಡಬೇಕು. ಕೆಎಸ್ಆರ್ಟಿಸಿ ₹ 600 ಪಾವತಿ ಮಾಡಲಿದೆ. ಇದರಿಂದ ವರ್ಷಕ್ಕೆ ಒಟ್ಟು ₹ 46 ಕೋಟಿ ಸಂಗ್ರಹ ಆಗಲಿದೆ. ಈ ಹಿಂದೆ ನೌಕರರ ಆರೋಗ್ಯಕ್ಕಾಗಿ ಕೆಎಸ್ಆರ್ಟಿಸಿ ಪ್ರತಿವರ್ಷ ₹ 16 ಕೋಟಿ ವೆಚ್ಚ ಮಾಡುತ್ತಿತ್ತು’ ಎಂದರು.</p>.<h2>ಏನೇನು ಸೌಲಭ್ಯ?</h2><h2></h2><p>lಸರ್ಕಾರಿ, ಖಾಸಗಿ ಸೇರಿ 250 ಆಸ್ಪತ್ರೆಗಳಲ್ಲಿ ಆರೋಗ್ಯ ಕಾರ್ಡ್ ಬಳಸಿ ನಗದುರಹಿತ ಚಿಕಿತ್ಸೆ</p><p>lಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ, ಸಾಮಾನ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯ</p><p>l ಯಾವುದೇ ಕಾಯಿಲೆಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ</p><p>l ನೌಕರರ ಮನೆಯ ಆರು ಜನರು ಆರೋಗ್ಯ ಕಾರ್ಡ್ ಬಳಸಿ ಚಿಕಿತ್ಸೆ ಪಡೆಯಬಹುದು</p><p>l ನೌಕರರು ನಿವೃತ್ತಿ ಆಗುವವರೆಗೂ ಸೌಲಭ್ಯ</p><p>l ಕಣ್ಣು ಮತ್ತು ದಂತ ಚಿಕಿತ್ಸಾ ವೆಚ್ಚವೂ ಲಭ್ಯ</p><p>l ಆಯುರ್ವೇದ, ಪ್ರಕೃತಿ, ಯುನಾನಿ ಮತ್ತು ಹೋಮಿಯೋಪತಿ ಚಿಕಿತ್ಸೆಗಳೂ ಸಿಗಲಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>