<p><strong>ಬೆಂಗಳೂರು:</strong> ಮಂಡ್ಯ ಜಿಲ್ಲೆಯ ನಾಗಮಂಗಲ ಕೆಎಸ್ಆರ್ಟಿಸಿ ಬಸ್ ಡಿಪೊ ಚಾಲಕ ಕಂ ನಿರ್ವಾಹಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸದಸ್ಯರು ಧರಣಿ ಆರಂಭಿಸಿದ್ದು, ಗದ್ದಲ ಹೆಚ್ಚಾಗಿದ್ದರಿಂದ ಸದನದ ಕಲಾಪವನ್ನು ಮಧ್ಯಾಹ್ನ 2.45ಕ್ಕೆ ಮುಂದೂಡಲಾಗಿದೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/story/district/mandya/ksrtc-driver-attempted-suicide-by-writing-a-letter-against-transport-minister-chaluvarayaswamy-in-nagamangala-mandya-2372343">ಚಲುವರಾಯಸ್ವಾಮಿ ವಿರುದ್ಧ ಪತ್ರ ಬರೆದಿಟ್ಟು ಕೆಎಸ್ಆರ್ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ</a></p>.<p>ಗುರುವಾರ ಪ್ರಶ್ನೋತ್ತರ ಕಲಾಪದ ಬಳಿಕ ಬಿಜೆಪಿಯ ಬಸವರಾಜ ಬೊಮ್ಮಾಯಿ ವಿಷಯ ಪ್ರಸ್ತಾಪಿಸಿದರು. ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ ಜಗದೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಕಾರಣಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದಾರೆ. ಘಟನೆ ನಡೆದು ಒಂದು ದಿನ ಕಳೆದರೂ ಎಫ್ಐಆರ್ ದಾಖಲಿಸಿಲ್ಲ. ಸರ್ಕಾರ ಸಚಿವರನ್ನು ರಕ್ಷಿಸುತ್ತಿದೆ. ತಕ್ಷಣ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.</p><p>ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಸದಸ್ಯರಾದ ಪಿ.ಎಂ.ನರೇಂದ್ರಸ್ವಾಮಿ ಮತ್ತು ರಮೇಶ್ ಬಂಡಿಸಿದ್ದೇಗೌಡ ಆಕ್ಷೇಪಿಸಿದರು. ಆಗ ಬಿಜೆಪಿ- ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರ ನಡೆಯಿತು.</p><p>ನಂತರ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, 'ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಚುನಾವಣೆ ಕಾರಣಕ್ಕೆ ಒತ್ತಡ ಹಾಕಿ ವರ್ಗಾವಣೆ ಮಾಡಿರುವುದೇ ಜಗದೀಶ್ ಆತ್ಮಹತ್ಯೆಗೆ ಯತ್ನಿಸಲು ಕಾರಣ' ಎಂದು ಆರೋಪಿಸಿದರು.</p><p>ಈ ಸಂದರ್ಭದಲ್ಲೂ ಕೋಲಾಹಲ ನಡೆಯಿತು.</p><p>ಗದ್ದಲದ ನಡುವೆಯೇ 'ಇದು ಕಮಿಷನ್ ಸರ್ಕಾರ, ಕೊಲೆಗಡುಕ ಸರ್ಕಾರ' ಎಂದು ಘೋಷಣೆ ಕೂಗುತ್ತಾ ಸಭಾಧ್ಯಕ್ಷರ ಪೀಠದ ಎದುರು ಧರಣಿ ಆರಂಭಿಸಿದ ಬಿಜೆಪಿ ಸದಸ್ಯರು, ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿದರು. ಗದ್ದಲ ಜೋರಾಗುತ್ತಿದ್ದಂತೆ ಸ್ಪೀಕರ್ ಯು.ಟಿ. ಖಾದರ್ ಕಲಾಪವನ್ನು ಮಧ್ಯಾಹ್ನ 2.45ಕ್ಕೆ ಮುಂದೂಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಂಡ್ಯ ಜಿಲ್ಲೆಯ ನಾಗಮಂಗಲ ಕೆಎಸ್ಆರ್ಟಿಸಿ ಬಸ್ ಡಿಪೊ ಚಾಲಕ ಕಂ ನಿರ್ವಾಹಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸದಸ್ಯರು ಧರಣಿ ಆರಂಭಿಸಿದ್ದು, ಗದ್ದಲ ಹೆಚ್ಚಾಗಿದ್ದರಿಂದ ಸದನದ ಕಲಾಪವನ್ನು ಮಧ್ಯಾಹ್ನ 2.45ಕ್ಕೆ ಮುಂದೂಡಲಾಗಿದೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/story/district/mandya/ksrtc-driver-attempted-suicide-by-writing-a-letter-against-transport-minister-chaluvarayaswamy-in-nagamangala-mandya-2372343">ಚಲುವರಾಯಸ್ವಾಮಿ ವಿರುದ್ಧ ಪತ್ರ ಬರೆದಿಟ್ಟು ಕೆಎಸ್ಆರ್ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ</a></p>.<p>ಗುರುವಾರ ಪ್ರಶ್ನೋತ್ತರ ಕಲಾಪದ ಬಳಿಕ ಬಿಜೆಪಿಯ ಬಸವರಾಜ ಬೊಮ್ಮಾಯಿ ವಿಷಯ ಪ್ರಸ್ತಾಪಿಸಿದರು. ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ ಜಗದೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಕಾರಣಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದಾರೆ. ಘಟನೆ ನಡೆದು ಒಂದು ದಿನ ಕಳೆದರೂ ಎಫ್ಐಆರ್ ದಾಖಲಿಸಿಲ್ಲ. ಸರ್ಕಾರ ಸಚಿವರನ್ನು ರಕ್ಷಿಸುತ್ತಿದೆ. ತಕ್ಷಣ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.</p><p>ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಸದಸ್ಯರಾದ ಪಿ.ಎಂ.ನರೇಂದ್ರಸ್ವಾಮಿ ಮತ್ತು ರಮೇಶ್ ಬಂಡಿಸಿದ್ದೇಗೌಡ ಆಕ್ಷೇಪಿಸಿದರು. ಆಗ ಬಿಜೆಪಿ- ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರ ನಡೆಯಿತು.</p><p>ನಂತರ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, 'ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಚುನಾವಣೆ ಕಾರಣಕ್ಕೆ ಒತ್ತಡ ಹಾಕಿ ವರ್ಗಾವಣೆ ಮಾಡಿರುವುದೇ ಜಗದೀಶ್ ಆತ್ಮಹತ್ಯೆಗೆ ಯತ್ನಿಸಲು ಕಾರಣ' ಎಂದು ಆರೋಪಿಸಿದರು.</p><p>ಈ ಸಂದರ್ಭದಲ್ಲೂ ಕೋಲಾಹಲ ನಡೆಯಿತು.</p><p>ಗದ್ದಲದ ನಡುವೆಯೇ 'ಇದು ಕಮಿಷನ್ ಸರ್ಕಾರ, ಕೊಲೆಗಡುಕ ಸರ್ಕಾರ' ಎಂದು ಘೋಷಣೆ ಕೂಗುತ್ತಾ ಸಭಾಧ್ಯಕ್ಷರ ಪೀಠದ ಎದುರು ಧರಣಿ ಆರಂಭಿಸಿದ ಬಿಜೆಪಿ ಸದಸ್ಯರು, ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿದರು. ಗದ್ದಲ ಜೋರಾಗುತ್ತಿದ್ದಂತೆ ಸ್ಪೀಕರ್ ಯು.ಟಿ. ಖಾದರ್ ಕಲಾಪವನ್ನು ಮಧ್ಯಾಹ್ನ 2.45ಕ್ಕೆ ಮುಂದೂಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>