<p><strong>ಮೈಸೂರು</strong>: ‘ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕು. ಅವರು ಕೂಡಲೇ ಹಸಿರು ಟವೆಲ್ ತೆಗೆಯಬೇಕು. ಇಲ್ಲದಿದ್ದರೆ ರೈತರೇ ತೆಗೆಯುತ್ತಾರೆ’ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ಕೊಟ್ಟರು.</p>.<p>‘ಚಂದ್ರಶೇಖರ್ ವಿರುದ್ಧದ ಆರೋಪಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಮೇ 28ರಂದು ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿ, ರಾಜ್ಯಪಾಲರಿಗೆ ಒತ್ತಾಯಪತ್ರ ಸಲ್ಲಿಸಲಾಗುವುದು’ ಎಂದು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳಿಂದ ರೈತ ಸಮುದಾಯಕ್ಕೆ ಅವಮಾನವಾಗಿದೆ. ಹಸಿರು ಟವೆಲ್ ಹಾಕಿದ ಎಲ್ಲರನ್ನೂ ಅನುಮಾನದಿಂದ ನೋಡುವ ಹಾಗಾಗಿದೆ. ಅವರು ಈ ರೀತಿ ಎಂದು ಗೊತ್ತಿದ್ದರಿಂದಲೇ ನಮ್ಮ ಸಂಘಟನೆಯಿಂದ ದೂರ ಇಟ್ಟಿದ್ದೆವು’ ಎಂದು ಹೇಳಿದರು.</p>.<p>‘ಕೋಡಿಹಳ್ಳಿ ನಿಜ ಸ್ವರೂಪ ಬಯಲಾಗಿದ್ದು, ಅವರೊಂದಿಗೆ ಇರುವ ಪ್ರಾಮಾಣಿಕರು ನಮ್ಮ ಸಂಘಟನೆ ಸೇರುವಂತೆ ಆಹ್ವಾನಿಸುತ್ತೇವೆ.ಅವರನ್ನು ನಂಬಿ ಕೆಎಸ್ಆರ್ಟಿಸಿಯ ಮುಗ್ಧ ನೌಕರರು ಬಲಿಯಾಗಿದ್ದಾರೆ. ಹಲವು ಮಂದಿ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕು. ಅವರು ಕೂಡಲೇ ಹಸಿರು ಟವೆಲ್ ತೆಗೆಯಬೇಕು. ಇಲ್ಲದಿದ್ದರೆ ರೈತರೇ ತೆಗೆಯುತ್ತಾರೆ’ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ಕೊಟ್ಟರು.</p>.<p>‘ಚಂದ್ರಶೇಖರ್ ವಿರುದ್ಧದ ಆರೋಪಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಮೇ 28ರಂದು ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿ, ರಾಜ್ಯಪಾಲರಿಗೆ ಒತ್ತಾಯಪತ್ರ ಸಲ್ಲಿಸಲಾಗುವುದು’ ಎಂದು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳಿಂದ ರೈತ ಸಮುದಾಯಕ್ಕೆ ಅವಮಾನವಾಗಿದೆ. ಹಸಿರು ಟವೆಲ್ ಹಾಕಿದ ಎಲ್ಲರನ್ನೂ ಅನುಮಾನದಿಂದ ನೋಡುವ ಹಾಗಾಗಿದೆ. ಅವರು ಈ ರೀತಿ ಎಂದು ಗೊತ್ತಿದ್ದರಿಂದಲೇ ನಮ್ಮ ಸಂಘಟನೆಯಿಂದ ದೂರ ಇಟ್ಟಿದ್ದೆವು’ ಎಂದು ಹೇಳಿದರು.</p>.<p>‘ಕೋಡಿಹಳ್ಳಿ ನಿಜ ಸ್ವರೂಪ ಬಯಲಾಗಿದ್ದು, ಅವರೊಂದಿಗೆ ಇರುವ ಪ್ರಾಮಾಣಿಕರು ನಮ್ಮ ಸಂಘಟನೆ ಸೇರುವಂತೆ ಆಹ್ವಾನಿಸುತ್ತೇವೆ.ಅವರನ್ನು ನಂಬಿ ಕೆಎಸ್ಆರ್ಟಿಸಿಯ ಮುಗ್ಧ ನೌಕರರು ಬಲಿಯಾಗಿದ್ದಾರೆ. ಹಲವು ಮಂದಿ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>