<p><strong>ಬೆಂಗಳೂರು: </strong>ಸಾರಿಗೆ ನೌಕರರ ಮುಷ್ಕರದಿಂದಾಗುವ ತೊಂದರೆ ತಪ್ಪಿಸಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಅಥವಾ ಪರ್ಯಾಯ ವಿಧಾನ ಬಳಸಿಕೊಂಡು ಪಾಠ ಬೋಧನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್ಲ ಜಿಲ್ಲೆಗಳ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.</p>.<p>ತರಗತಿಗಳಿಗೆ ವಿದ್ಯಾರ್ಥಿಗಳ ನೇರ ಹಾಜರಾತಿ ಕಡ್ಡಾಯ ಅಲ್ಲ. ಆದರೆ, ತರಗತಿಗಳಿಗೆ ಹಾಜರಾಗುವವರಿಗೆ ಸಾರಿಗೆ ನೌಕರರ ಮುಷ್ಕರದಿಂದ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ, ತುರ್ತು ಸಂದರ್ಭಗಳಲ್ಲಿ ಆಯಾ ಜಿಲ್ಲಾಡಳಿತದ ಸೂಚನೆ ಅನ್ವಯ ಕ್ರಮ ತೆಗೆದುಕೊಳ್ಳಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.</p>.<p>ಆರನೇ ವೇತನ ಆಯೋಗದ ಶಿಫಾರಸು ಅನ್ವಯ ಆಗಲೇಬೇಕು ಎಂದು ಸಾರಿಗೆ ನೌಕರರ ಕೂಟ ಪಟ್ಟು ಹಿಡಿದಿದ್ದು, ಮುಷ್ಕರ ನಡೆಸುತ್ತಿದೆ.</p>.<p><strong>ಓದಿ:</strong><a href="https://www.prajavani.net/karnataka-news/ksrtc-strike-transport-department-karnataka-laxman-savadi-820100.html" itemprop="url">ಮುಷ್ಕರ: ಬಸ್ ಓಡಾಟಕ್ಕೆ ಸಂಚಕಾರ, ಸರ್ಕಾರದ ಎಚ್ಚರಿಕೆಗೆ ಬಗ್ಗದ ಸಾರಿಗೆ ನೌಕರರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾರಿಗೆ ನೌಕರರ ಮುಷ್ಕರದಿಂದಾಗುವ ತೊಂದರೆ ತಪ್ಪಿಸಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಅಥವಾ ಪರ್ಯಾಯ ವಿಧಾನ ಬಳಸಿಕೊಂಡು ಪಾಠ ಬೋಧನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್ಲ ಜಿಲ್ಲೆಗಳ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.</p>.<p>ತರಗತಿಗಳಿಗೆ ವಿದ್ಯಾರ್ಥಿಗಳ ನೇರ ಹಾಜರಾತಿ ಕಡ್ಡಾಯ ಅಲ್ಲ. ಆದರೆ, ತರಗತಿಗಳಿಗೆ ಹಾಜರಾಗುವವರಿಗೆ ಸಾರಿಗೆ ನೌಕರರ ಮುಷ್ಕರದಿಂದ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ, ತುರ್ತು ಸಂದರ್ಭಗಳಲ್ಲಿ ಆಯಾ ಜಿಲ್ಲಾಡಳಿತದ ಸೂಚನೆ ಅನ್ವಯ ಕ್ರಮ ತೆಗೆದುಕೊಳ್ಳಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.</p>.<p>ಆರನೇ ವೇತನ ಆಯೋಗದ ಶಿಫಾರಸು ಅನ್ವಯ ಆಗಲೇಬೇಕು ಎಂದು ಸಾರಿಗೆ ನೌಕರರ ಕೂಟ ಪಟ್ಟು ಹಿಡಿದಿದ್ದು, ಮುಷ್ಕರ ನಡೆಸುತ್ತಿದೆ.</p>.<p><strong>ಓದಿ:</strong><a href="https://www.prajavani.net/karnataka-news/ksrtc-strike-transport-department-karnataka-laxman-savadi-820100.html" itemprop="url">ಮುಷ್ಕರ: ಬಸ್ ಓಡಾಟಕ್ಕೆ ಸಂಚಕಾರ, ಸರ್ಕಾರದ ಎಚ್ಚರಿಕೆಗೆ ಬಗ್ಗದ ಸಾರಿಗೆ ನೌಕರರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>