<p><strong>ಬೆಂಗಳೂರು</strong>: ಕೆಲಸ ಮಾಡಲು ಸಾಧ್ಯವಾಗದಷ್ಟು ಅನಾರೋಗ್ಯ ಇರುವ ಅಧಿಕಾರಿಗಳು ಮತ್ತು ನೌಕರರಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು (ವಿಆರ್ಎಸ್) ಕೆಎಸ್ಆರ್ಟಿಸಿ ಪ್ರಕಟಿಸಿದ್ದು, ಈ ಕುರಿತ ಅರ್ಜಿಗಳನ್ನು ಪರಿಶೀಲಿಸಿ, ಅಂಗೀಕರಿಸಲು ವಿಭಾಗೀಯ ಮಟ್ಟದಲ್ಲಿಯೇ ಸಮಿತಿಗಳನ್ನು ಮಂಗಳವಾರ ರಚನೆ ಮಾಡಿದೆ.</p>.<p>‘ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಾತ್ಮಕ ಕಾರಣದಿಂದ ಮತ್ತು ನೌಕರರ ಹಿತದೃಷ್ಟಿಯಿಂದ ಈ ಯೋಜನೆ ಘೋಷಿಸಲಾಗಿದೆ. ಸ್ವಯಂ ನಿವೃತ್ತಿ ತೆಗೆದುಕೊಳ್ಳುವವರಿಗೆ ಆಕರ್ಷಕ ಪರಿಹಾರವೂ ಸಿಗಲಿದೆ’ ಎಂದೂ ನಿಗಮ ಹೇಳಿದೆ.</p>.<p>ದರ್ಜೆ 3 ಮತ್ತು ದರ್ಜೆ 4ರ ನೌಕರರ ಅರ್ಜಿಗಳನ್ನು ಪರಿಶೀಲಿಸಲು, ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ನೌಕರರ ಅರ್ಜಿಗಳನ್ನು ಆಯಾ ಆಡಳಿತ ನಿಯಂತ್ರಣಕ್ಕೆ ಒಳಪಟ್ಟ ವಿಭಾಗದ ಸಮಿತಿಯೇ ಪರಿಶೀಲಿಸಿ ಅಂಗೀಕರಿಸಲು ಸೂಚಿಸಲಾಗಿದೆ. ಎಲ್ಲ ಅಧಿಕಾರಿಗಳು ಅಥವಾ ದರ್ಜೆ 3ರ ಮೇಲ್ವಿಚಾರಕ ನೌಕರರ ಹಾಗೂ ಕೇಂದ್ರ ಕಚೇರಿ ನೌಕರರ ಅರ್ಜಿ ಪರಿಶೀಲಿಸಿ ಅಂಗೀಕರಿಸಲು ಕೇಂದ್ರಕಚೇರಿ ಮಟ್ಟದ ಸಮಿತಿಗೆ ಸೂಚಿಸಲಾಗಿದೆ.</p>.<p>‘2012 ಅಕ್ಟೋಬರ್ 12ರ ಸುತ್ತೋಲೆಯ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಳ್ಳಬೇಕು’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಲಸ ಮಾಡಲು ಸಾಧ್ಯವಾಗದಷ್ಟು ಅನಾರೋಗ್ಯ ಇರುವ ಅಧಿಕಾರಿಗಳು ಮತ್ತು ನೌಕರರಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು (ವಿಆರ್ಎಸ್) ಕೆಎಸ್ಆರ್ಟಿಸಿ ಪ್ರಕಟಿಸಿದ್ದು, ಈ ಕುರಿತ ಅರ್ಜಿಗಳನ್ನು ಪರಿಶೀಲಿಸಿ, ಅಂಗೀಕರಿಸಲು ವಿಭಾಗೀಯ ಮಟ್ಟದಲ್ಲಿಯೇ ಸಮಿತಿಗಳನ್ನು ಮಂಗಳವಾರ ರಚನೆ ಮಾಡಿದೆ.</p>.<p>‘ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಾತ್ಮಕ ಕಾರಣದಿಂದ ಮತ್ತು ನೌಕರರ ಹಿತದೃಷ್ಟಿಯಿಂದ ಈ ಯೋಜನೆ ಘೋಷಿಸಲಾಗಿದೆ. ಸ್ವಯಂ ನಿವೃತ್ತಿ ತೆಗೆದುಕೊಳ್ಳುವವರಿಗೆ ಆಕರ್ಷಕ ಪರಿಹಾರವೂ ಸಿಗಲಿದೆ’ ಎಂದೂ ನಿಗಮ ಹೇಳಿದೆ.</p>.<p>ದರ್ಜೆ 3 ಮತ್ತು ದರ್ಜೆ 4ರ ನೌಕರರ ಅರ್ಜಿಗಳನ್ನು ಪರಿಶೀಲಿಸಲು, ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ನೌಕರರ ಅರ್ಜಿಗಳನ್ನು ಆಯಾ ಆಡಳಿತ ನಿಯಂತ್ರಣಕ್ಕೆ ಒಳಪಟ್ಟ ವಿಭಾಗದ ಸಮಿತಿಯೇ ಪರಿಶೀಲಿಸಿ ಅಂಗೀಕರಿಸಲು ಸೂಚಿಸಲಾಗಿದೆ. ಎಲ್ಲ ಅಧಿಕಾರಿಗಳು ಅಥವಾ ದರ್ಜೆ 3ರ ಮೇಲ್ವಿಚಾರಕ ನೌಕರರ ಹಾಗೂ ಕೇಂದ್ರ ಕಚೇರಿ ನೌಕರರ ಅರ್ಜಿ ಪರಿಶೀಲಿಸಿ ಅಂಗೀಕರಿಸಲು ಕೇಂದ್ರಕಚೇರಿ ಮಟ್ಟದ ಸಮಿತಿಗೆ ಸೂಚಿಸಲಾಗಿದೆ.</p>.<p>‘2012 ಅಕ್ಟೋಬರ್ 12ರ ಸುತ್ತೋಲೆಯ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಳ್ಳಬೇಕು’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>