‘ಜಂಟಿ ಕ್ರಿಯಾ ಸಮಿತಿಯಿಂದ 16 ಬೇಡಿಕೆಗಳ ಪ್ರಣಾಳಿಕೆಯನ್ನು ಸಾರಿಗೆ ನಿಗಮಗಳ ಆಡಳಿತ ವರ್ಗಕ್ಕೆ ಬಹುದಿನಗಳ ಹಿಂದೆಯೇ ನೀಡಲಾಗಿದೆ. ಇದುವರೆಗೆ ಆಶ್ವಾಸನೆಗಳು ಸಿಗುತ್ತಿವೆ ಹೊರತು, ಬೇಡಿಕೆ ಈಡೇರುತ್ತಿಲ್ಲ. ಈ ಮಧ್ಯೆ ವೇತನ ಪರಿಷ್ಕರಣೆ ಇಲ್ಲದೆ ನೌಕರರು ಸಂಕಷ್ಟಕ್ಕೆ ಸಿಲುಕಿದ್ದು, ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಕೂಡಲೇ ಸರ್ಕಾರ ಈ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಒತ್ತಾಯಿಸಿದರು.