‘ನಾವು ಕುಚಲಕ್ಕಿ ಮಾಡುವ ತಳಿಗಳಾದ ಜಯ, ಅಭಿಲಾಷ ಜ್ಯೋತಿ, ಎಂಒ 4ಗೆ ಬೆಂಬಲ ಬೆಲೆ ಘೋಷಿಸಿದ್ದೇವೆ. 13 ಲಕ್ಷ ಕ್ವಿಂಟಲ್ ಭತ್ತ ಖರೀದಿಯ ಗುರಿ ಇದೆ. ಈ ಪೈಕಿ, 8.50 ಲಕ್ಷ ಕ್ವಿಂಟಲ್ ಭತ್ತ ಬರುವ ಅಂದಾಜಿದೆ. ಅದನ್ನು ವಿತರಿಸಲಾಗುವುದು. ಕೇಂದ್ರ ಸರ್ಕಾರ ಕೊಡುವ ಬೆಂಬಲ ಬೆಲೆಗೆ ಭತ್ತ ಸಿಗದ ಕಾರಣ, ಪ್ರತಿ ಕ್ವಿಂಟಲ್ಗೆ ₹ 500 ಹೆಚ್ಚುವರಿ ಬೆಲೆ ಕೊಡಲಾಗುವುದು. ಇದನ್ನು ರಾಜ್ಯ ಸರ್ಕಾರ ಭರಿಸುತ್ತದೆ. ಇದಕ್ಕೆ ₹ 132 ಕೋಟಿ ಆಗುವ ಅಂದಾಜಿದೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ಕೃಷಿ ಇಲಾಖೆ ಜೊತೆಗೆ ಸಭೆ ಮಾಡಿದ್ದೇನೆ‘ ಎಂದರು.