<p><strong>ಮಂಗಳೂರು</strong>: ಇಲ್ಲಿಗೆ ಸಮೀಪದ ಕುಡುಪು ಶ್ರೀ ಅನಂತಪದ್ಮನಾಭದೇವಸ್ಥಾನಕ್ಕೆ ಬಾಳೆಹಣ್ಣು ಪೂರೈಸುವ ವಾರ್ಷಿಕ ಗುತ್ತಿಗೆಯನ್ನು ಅನ್ಯಧರ್ಮೀಯ ವ್ಯಾಪಾರಿಗಳಿಗೆ ನೀಡದಿರಲು ಆಡಳಿತ ಮಂಡಳಿಯು ಮುಂದಾಗಿದೆ.</p>.<p>2021–22ನೇ ಸಾಲಿನಲ್ಲಿ ದೇವಸ್ಥಾನಕ್ಕೆ ಬಾಳೆಹಣ್ಣು ಪೂರೈಸುವ ಗುತ್ತಿಗೆಯನ್ನು ಮುಸ್ಲಿಂ ವ್ಯಾಪಾರಿಗೆ ನೀಡಿದ್ದಕ್ಕೆ ಧಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳು ಹರಿದಾಡುತ್ತಿದ್ದವು.</p>.<p>ಕೆಲವರು ದೇವಸ್ಥಾನದ ಕಚೇರಿ ಕರೆ ಮಾಡಿ ಸಿಬ್ಬಂದಿಗೂ ಕಿರಿಕಿರಿ ಉಂಟು ಮಾಡುತ್ತಿದ್ದರು. ಇದರಿಂದ ಬೇಸತ್ತ ದೇವಸ್ಥಾನದ ಆಡಳಿತ ಮಂಡಳಿ 2022–23ನೇ ಸಾಲಿಗೆ ಬಾಳೆ ಹಣ್ಣು ಹಾಗೂ ಇತರ ಸಾಮಗ್ರಿ ಪೂರೈಕೆಯ ಗುತ್ತಿಗೆಯನ್ನು ಹಿಂದೂಗಳಲ್ಲದ ವ್ಯಾಪಾರಿಗಳಿಗೆ ನೀಡದಿರುವ ನಿರ್ಧಾರಕ್ಕೆ ಬಂದಿದೆ.</p>.<p>‘ದರಪಟ್ಟಿ ಆಹ್ವಾನಿಸಲು ನೀಡಿದ ಜಾಹೀರಾತಿನಲ್ಲಿ ಈ ಬಗ್ಗೆ ಉಲ್ಲೇಖಿಸಿಲ್ಲ. ಈ ಬಗ್ಗೆ ವ್ಯಾಪಾರಿಗಳಿಗೆ ಮೌಖಿಕವಾಗಿ ತಿಳಿಸಿದ್ದೇವೆ ಅಷ್ಟೇ’ ಎಂದು ದೇವಸ್ಥಾನದ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಇಲ್ಲಿಗೆ ಸಮೀಪದ ಕುಡುಪು ಶ್ರೀ ಅನಂತಪದ್ಮನಾಭದೇವಸ್ಥಾನಕ್ಕೆ ಬಾಳೆಹಣ್ಣು ಪೂರೈಸುವ ವಾರ್ಷಿಕ ಗುತ್ತಿಗೆಯನ್ನು ಅನ್ಯಧರ್ಮೀಯ ವ್ಯಾಪಾರಿಗಳಿಗೆ ನೀಡದಿರಲು ಆಡಳಿತ ಮಂಡಳಿಯು ಮುಂದಾಗಿದೆ.</p>.<p>2021–22ನೇ ಸಾಲಿನಲ್ಲಿ ದೇವಸ್ಥಾನಕ್ಕೆ ಬಾಳೆಹಣ್ಣು ಪೂರೈಸುವ ಗುತ್ತಿಗೆಯನ್ನು ಮುಸ್ಲಿಂ ವ್ಯಾಪಾರಿಗೆ ನೀಡಿದ್ದಕ್ಕೆ ಧಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳು ಹರಿದಾಡುತ್ತಿದ್ದವು.</p>.<p>ಕೆಲವರು ದೇವಸ್ಥಾನದ ಕಚೇರಿ ಕರೆ ಮಾಡಿ ಸಿಬ್ಬಂದಿಗೂ ಕಿರಿಕಿರಿ ಉಂಟು ಮಾಡುತ್ತಿದ್ದರು. ಇದರಿಂದ ಬೇಸತ್ತ ದೇವಸ್ಥಾನದ ಆಡಳಿತ ಮಂಡಳಿ 2022–23ನೇ ಸಾಲಿಗೆ ಬಾಳೆ ಹಣ್ಣು ಹಾಗೂ ಇತರ ಸಾಮಗ್ರಿ ಪೂರೈಕೆಯ ಗುತ್ತಿಗೆಯನ್ನು ಹಿಂದೂಗಳಲ್ಲದ ವ್ಯಾಪಾರಿಗಳಿಗೆ ನೀಡದಿರುವ ನಿರ್ಧಾರಕ್ಕೆ ಬಂದಿದೆ.</p>.<p>‘ದರಪಟ್ಟಿ ಆಹ್ವಾನಿಸಲು ನೀಡಿದ ಜಾಹೀರಾತಿನಲ್ಲಿ ಈ ಬಗ್ಗೆ ಉಲ್ಲೇಖಿಸಿಲ್ಲ. ಈ ಬಗ್ಗೆ ವ್ಯಾಪಾರಿಗಳಿಗೆ ಮೌಖಿಕವಾಗಿ ತಿಳಿಸಿದ್ದೇವೆ ಅಷ್ಟೇ’ ಎಂದು ದೇವಸ್ಥಾನದ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>