ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಭಾರಿ ಆದಾಯದಲ್ಲಿ ₹ 3.83 ಕೋಟಿ ಕುಸಿತ ಕಂಡಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಠೇವಣಿ ಇರಿಸಿದ ಹಣಕ್ಕೆ ಬಡ್ಡಿ ಸಿಗದೆ ಇರುವುದು ಹಾಗೂ ಕಳೆದ ಮಳೆಗಾಲದಲ್ಲಿ ಹೆದ್ದಾರಿ, ರಸ್ತೆ ಸಂಚಾರ ಅಡಚಣೆ, ಪ್ರಾಕೃತಿಕ ವಿಕೋಪಗಳಿಂದ ಸಂಚಾರ ವ್ಯತ್ಯಯಗೊಂಡು ಯಾತ್ರಾರ್ಥಿಗಳ ಕೊರತೆ ಆದಾಯ ಕುಸಿತಕ್ಕೆ ಮುಖ್ಯ ಕಾರಣಗಳು ಎಂದು ಅಂದಾಜಿಸಲಾಗಿದೆ ಎಂದು ದೇವಾಲಯದ ಮುಖ್ಯ ಕಾರ್ಯನಿರ್ವಹರ್ಣಾಧಿಕಾರಿ ರವೀಂದ್ರ ತಿಳಿಸಿದ್ದಾರೆ.