‘ನೆರೆ ಸಂತ್ರಸ್ತರಿಗೆ ಬಿಜೆಪಿ ಸರ್ಕಾರ ಯಾವ ರೀತಿ ಸ್ಪಂದಿಸಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಆ ಬಗ್ಗೆ ಸದನದಲ್ಲೇ ಚರ್ಚೆ ಮಾಡಲಾಗುವುದು. ನೈಸರ್ಗಿಕ ವಿಕೋಪದ ಸಂದರ್ಭಗಳಲ್ಲಿ ರಾಜ್ಯಗಳಿಗೆ ಮೀಸಲಿಟ್ಟಿರುವ ಪಾಲನ್ನು ಮಾತ್ರ ಕೇಂದ್ರ ಕೊಡುತ್ತದೆ. ಕೆಲವೊಮ್ಮೆ ಹೆಚ್ಚಿನ ನೆರವು ನೀಡಲಾಗುತ್ತದೆ. ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನ, ಮಹಾರಾಷ್ಟ್ರಕ್ಕೆ ಹೆಚ್ಚಿನ ಅನುದಾನ ನೀಡಿದ್ದು, ನಮಗೆ ಕಡಿಮೆ ನೆರವು ಕೊಟ್ಟಿದೆ. ಕೇಂದ್ರದ ಇಂದಿನ ಆರ್ಥಿಕ ಪರಿಸ್ಥಿತಿ ಗಮನಿಸಿದರೆ ಹೆಚ್ಚಿನ ನೆರವಿನ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯವಿಲ್ಲ’ ಎಂದು ಆರೋಪಿಸಿದರು.