ಬೆಂಗಳೂರು: ಪ್ರವಾಹ ಪೀಡಿತ ಕೇರಳಕ್ಕೆ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ₹10 ಕೋಟಿ ಪರಿಹಾರ ಧನ ಘೋಷಿಸಿದ್ದಾರೆ. ಅದೇ ವೇಳೆ ಪ್ರವಾಹ ಪೀಡಿತ ಪ್ರದೇಶಗಳಿಗೆ ವೈದ್ಯರ ತಂಡ ಮತ್ತು ಪರಿಹಾರ ಸಾಮಾಗ್ರಿಗಳನ್ನು ಕಳಿಸಿಕೊಡುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ಅವರಿಗೆ ನಿರ್ದೇಶಿಸಿದ್ದಾರೆ.