ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ ಪೀಡಿತ ಕೇರಳಕ್ಕೆ ₹10 ಕೋಟಿ ಪರಿಹಾರ ಘೋಷಿಸಿದ ಕುಮಾರಸ್ವಾಮಿ

Last Updated 10 ಆಗಸ್ಟ್ 2018, 12:44 IST
ಅಕ್ಷರ ಗಾತ್ರ

ಬೆಂಗಳೂರು: ಪ್ರವಾಹ ಪೀಡಿತ ಕೇರಳಕ್ಕೆ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ₹10 ಕೋಟಿ ಪರಿಹಾರ ಧನ ಘೋಷಿಸಿದ್ದಾರೆ. ಅದೇ ವೇಳೆ ಪ್ರವಾಹ ಪೀಡಿತ ಪ್ರದೇಶಗಳಿಗೆ ವೈದ್ಯರ ತಂಡ ಮತ್ತು ಪರಿಹಾರ ಸಾಮಾಗ್ರಿಗಳನ್ನು ಕಳಿಸಿಕೊಡುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ಅವರಿಗೆ ನಿರ್ದೇಶಿಸಿದ್ದಾರೆ.

ಕಳೆದೆರಡು ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಿಂದಾಗಿ ಭೂ ಪ್ರದೇಶಗಳು ಜಲಾವೃತವಾಗಿದ್ದು, ಮಣ್ಣು ಗೋಡೆಗಳು ಕುಸಿದಿವೆ.ಮಳೆಯಿಂದಾಗಿ ಇಲ್ಲಿಯವರೆಗೆ 27 ಮಂದಿ ಸಾವನ್ನಪ್ಪಿದ್ದಾರೆ.

ಕುಮಾರಸ್ವಾಮಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿ ಕೇರಳದ ಸ್ಥಿತಿ ಗತಿಗಳ ಬಗ್ಗೆ ಮಾತುಕತೆ ನಡೆಸಿದ್ದು,ಎಲ್ಲ ರೀತಿಯ ನೆರವು ನೀಡುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT