<p><strong>ಹುಬ್ಬಳ್ಳಿ: </strong>ಪಿಎಸ್ಐ ನೇಮಕಾತಿ ವಿಚಾರದಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದ ಕಾರಣ ಸರ್ಕಾರ ಮರು ಪರೀಕ್ಷೆ ನಡೆಸುವುದಾಗಿ ಹೇಳಿದ್ದು, ಇದಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ಸರ್ಕಾರದ ನಿರ್ಧಾರದಿಂದ<br />ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಪ್ರಕರಣ ಇನ್ನು ತನಿಖೆಯ ಹಂತದಲ್ಲಿದೆ. ಈಗಲೇ ಮರುಪರೀಕ್ಷೆ ಅಂದರೆ ಹೇಗೆ ಎಂದು ಪ್ರಶ್ನಿಸಿದರು.</p>.<p>ಮುಂದೆ ಸರಿಯಾಗಿ ಪರೀಕ್ಷೆ ಮಾಡುತ್ತೀರಿ ಅನ್ನೋದಕ್ಕೆ ಏನು ಗ್ಯಾರಂಟಿ. ತನಿಖೆಯಲ್ಲಿ ಎಲ್ಲವೂ ಹೊರ ಬರಬೇಕು. ಯಾವ ಆಧಾರದ ಮೇಲೆ ಅಕ್ರಮ ಎಸಗಿದ್ದಾರೆ ಎನ್ನುವುದು ಗೊತ್ತಾಗಬೇಕು.<br />2011ರ ಕೆಪಿಎಸ್ಸಿ ಬ್ಯಾಚ್ ಅಭ್ಯರ್ಥಿಗಳು ಹೇಗೆ ವಂಚಿತರಾಗಿದ್ದರೊ; ಅದು ಇಂದಿಗೂ ಮುಕ್ತಾಯವಾಗಿಲ್ಲ.<br />ಯಾರೋ ಕೊಟ್ಟಿರುವ ದೂರಿನ ಆಧಾರದ ಮೇಲೆ ಈ ರೀತಿ ಮಾಡಬಾರದು ಎಂದರು.</p>.<p>ಸರ್ಕಾರದ ನಿರ್ಧಾರದಿಂದ ಸರಿಯಾಗಿ ಓದಿ ಪರೀಕ್ಷೆ ಬರೆದವರಿಗೆ ತೊಂದರೆ ಆಗಬಾರದು. ಸರಿಯಾದ ಮುಂಜಾಗ್ರತಾ ಕ್ರಮ ವಹಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ.ರೇವಣ್ಣ ಅವರ ಕಾಲದಲ್ಲಿ ಹಣ ಪಡೆದಿರುವ ಬಗ್ಗೆ ಒಂದೇ ಒಂದು ಉದಾಹರಣೆ ಕೊಡಿ ನೋಡೊಣ. ಈ ವ್ಯವಸ್ಥೆ ಸರಿಪಡಿಸದಿದ್ದರೆ ಕೇವಲ ದುಡ್ಡಿದ್ದವರಿಗೆ ಮಾತ್ರ ಉನ್ನತ ಹುದ್ದೆಗಳು ಸಿಗುತ್ತವೆ. ಹಣ ಕೊಟ್ಟು ಕೆಲಸ ಪಡೆದವರು ಎಷ್ಟು ಬಡಜನರ ಪರವಾಗಿ ಕೆಲಸ ಮಾಡುತ್ತಾರೆ ಎಂದು ಪ್ರಶ್ನಿಸಿದರು.</p>.<p>ಬಡ ಮಕ್ಕಳ ಭವಿಷ್ಯವನ್ನು ಸರಿಪಡಿಸಲು ಪ್ರಾಮಾಣಿಕತೆ ಇರಬೇಕು. ಸುಲಭವಾಗಿ ಹಣ ಮಾಡಬೇಕು ಅನ್ನೋದೇ ಆಡಳಿತ ವ್ಯವಸ್ಥೆ ವಿಚಾರ. ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮನವಿ ಮಾಡುವೆ. ಮರು ಪರೀಕ್ಷೆ ನಿರ್ಧಾರ ಸರಿಯಲ್ಲ ಎನ್ನುವುದನ್ನು ಹೇಳುತ್ತೇನೆ ಎಂದರು.</p>.<p>ಅಕ್ರಮದಲ್ಲಿ ಯಾರು ನಿಜವಾದ ಆರೋಪಿಗಳಿದ್ದಾರೆ ಅವರ ವಿರುದ್ಧ ಕ್ರಮ ಆಗಲಿ.<br />ಅದರ ಆಧಾರದ ಮೇಲೆ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಬೇಕು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯ ಆಗಬಾರದು ಎಂದು ಹೇಳಿದರು.</p>.<p>ಪಿಎಸ್ಐ ಪರೀಕ್ಷೆ ಬರೆದ ಕೆಲ ವಿದ್ಯಾರ್ಥಿಗಳು ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್ ನಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದರು. ಮರುಪರೀಕ್ಷೆ ನಡೆಸಿದರೆ ನಮಗೆ ಅನ್ಯಾಯವಾಗುತ್ತದೆ. ಈ ಕುರಿತು ಸರ್ಕಾರದ ಜೊತೆ ಮಾತನಾಡಬೇಕು ಎಂದು ಕೋರಿದರು.</p>.<p>ನಿಮ್ಮ ಪರವಾಗಿ ನಾನಿದ್ದೇನೆ. ಆತಂಕ ಪಡಬೇಡಿ. ಮುಖ್ಯಮಂತ್ರಿ ಜೊತೆ ಮಾತನಾಡುವೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/chief-minister-basavaraj-bommai-says-that-government-will-conduct-reexam-for-psi-recruitment-932520.html"><strong>ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ: ಸಿಎಂ ಬೊಮ್ಮಾಯಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಪಿಎಸ್ಐ ನೇಮಕಾತಿ ವಿಚಾರದಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದ ಕಾರಣ ಸರ್ಕಾರ ಮರು ಪರೀಕ್ಷೆ ನಡೆಸುವುದಾಗಿ ಹೇಳಿದ್ದು, ಇದಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ಸರ್ಕಾರದ ನಿರ್ಧಾರದಿಂದ<br />ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಪ್ರಕರಣ ಇನ್ನು ತನಿಖೆಯ ಹಂತದಲ್ಲಿದೆ. ಈಗಲೇ ಮರುಪರೀಕ್ಷೆ ಅಂದರೆ ಹೇಗೆ ಎಂದು ಪ್ರಶ್ನಿಸಿದರು.</p>.<p>ಮುಂದೆ ಸರಿಯಾಗಿ ಪರೀಕ್ಷೆ ಮಾಡುತ್ತೀರಿ ಅನ್ನೋದಕ್ಕೆ ಏನು ಗ್ಯಾರಂಟಿ. ತನಿಖೆಯಲ್ಲಿ ಎಲ್ಲವೂ ಹೊರ ಬರಬೇಕು. ಯಾವ ಆಧಾರದ ಮೇಲೆ ಅಕ್ರಮ ಎಸಗಿದ್ದಾರೆ ಎನ್ನುವುದು ಗೊತ್ತಾಗಬೇಕು.<br />2011ರ ಕೆಪಿಎಸ್ಸಿ ಬ್ಯಾಚ್ ಅಭ್ಯರ್ಥಿಗಳು ಹೇಗೆ ವಂಚಿತರಾಗಿದ್ದರೊ; ಅದು ಇಂದಿಗೂ ಮುಕ್ತಾಯವಾಗಿಲ್ಲ.<br />ಯಾರೋ ಕೊಟ್ಟಿರುವ ದೂರಿನ ಆಧಾರದ ಮೇಲೆ ಈ ರೀತಿ ಮಾಡಬಾರದು ಎಂದರು.</p>.<p>ಸರ್ಕಾರದ ನಿರ್ಧಾರದಿಂದ ಸರಿಯಾಗಿ ಓದಿ ಪರೀಕ್ಷೆ ಬರೆದವರಿಗೆ ತೊಂದರೆ ಆಗಬಾರದು. ಸರಿಯಾದ ಮುಂಜಾಗ್ರತಾ ಕ್ರಮ ವಹಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ.ರೇವಣ್ಣ ಅವರ ಕಾಲದಲ್ಲಿ ಹಣ ಪಡೆದಿರುವ ಬಗ್ಗೆ ಒಂದೇ ಒಂದು ಉದಾಹರಣೆ ಕೊಡಿ ನೋಡೊಣ. ಈ ವ್ಯವಸ್ಥೆ ಸರಿಪಡಿಸದಿದ್ದರೆ ಕೇವಲ ದುಡ್ಡಿದ್ದವರಿಗೆ ಮಾತ್ರ ಉನ್ನತ ಹುದ್ದೆಗಳು ಸಿಗುತ್ತವೆ. ಹಣ ಕೊಟ್ಟು ಕೆಲಸ ಪಡೆದವರು ಎಷ್ಟು ಬಡಜನರ ಪರವಾಗಿ ಕೆಲಸ ಮಾಡುತ್ತಾರೆ ಎಂದು ಪ್ರಶ್ನಿಸಿದರು.</p>.<p>ಬಡ ಮಕ್ಕಳ ಭವಿಷ್ಯವನ್ನು ಸರಿಪಡಿಸಲು ಪ್ರಾಮಾಣಿಕತೆ ಇರಬೇಕು. ಸುಲಭವಾಗಿ ಹಣ ಮಾಡಬೇಕು ಅನ್ನೋದೇ ಆಡಳಿತ ವ್ಯವಸ್ಥೆ ವಿಚಾರ. ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮನವಿ ಮಾಡುವೆ. ಮರು ಪರೀಕ್ಷೆ ನಿರ್ಧಾರ ಸರಿಯಲ್ಲ ಎನ್ನುವುದನ್ನು ಹೇಳುತ್ತೇನೆ ಎಂದರು.</p>.<p>ಅಕ್ರಮದಲ್ಲಿ ಯಾರು ನಿಜವಾದ ಆರೋಪಿಗಳಿದ್ದಾರೆ ಅವರ ವಿರುದ್ಧ ಕ್ರಮ ಆಗಲಿ.<br />ಅದರ ಆಧಾರದ ಮೇಲೆ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಬೇಕು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯ ಆಗಬಾರದು ಎಂದು ಹೇಳಿದರು.</p>.<p>ಪಿಎಸ್ಐ ಪರೀಕ್ಷೆ ಬರೆದ ಕೆಲ ವಿದ್ಯಾರ್ಥಿಗಳು ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್ ನಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದರು. ಮರುಪರೀಕ್ಷೆ ನಡೆಸಿದರೆ ನಮಗೆ ಅನ್ಯಾಯವಾಗುತ್ತದೆ. ಈ ಕುರಿತು ಸರ್ಕಾರದ ಜೊತೆ ಮಾತನಾಡಬೇಕು ಎಂದು ಕೋರಿದರು.</p>.<p>ನಿಮ್ಮ ಪರವಾಗಿ ನಾನಿದ್ದೇನೆ. ಆತಂಕ ಪಡಬೇಡಿ. ಮುಖ್ಯಮಂತ್ರಿ ಜೊತೆ ಮಾತನಾಡುವೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/chief-minister-basavaraj-bommai-says-that-government-will-conduct-reexam-for-psi-recruitment-932520.html"><strong>ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ: ಸಿಎಂ ಬೊಮ್ಮಾಯಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>