<p><strong>ಹುಬ್ಬಳ್ಳಿ: </strong>‘ಪ್ರಧಾನಿ ನರೇಂದ್ರ ಮೋದಿ ಅವರ ಕೈಕೆಳಗೆ ನಾನು ಪ್ರಮುಖ ಖಾತೆ ನಿರ್ವಹಿಸುತ್ತಿದ್ದೇನೆ. ಅಲ್ಲಿ ನನಗೆ ಸಂತೃಪ್ತಿ ಇದೆ. ಬೇರೆ ಹುದ್ದೆಗಳ ಬಗ್ಗೆ ಚಿಂತಿಸುವ ಪ್ರಶ್ನೆಯೇ ಇಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಪೇಶ್ವೆ ವಂಶದವರು ಮುಖ್ಯಮಂತ್ರಿ ಆಗಬಾರದು ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶನಿವಾರ ಪ್ರತಿಕ್ರಿಯಿಸಿದರು. ‘ಕುಮಾರಸ್ವಾಮಿ ಅವರ ಅಪ್ರಬುದ್ಧ–ಬಾಲಿಶ ಹೇಳಿಕೆಗಳಿಗೆ ಇದಕ್ಕಿಂತ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ’ ಎಂದರು.</p>.<p>‘ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು’ ಎಂಬ ಸಚಿವ ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಈಗಾಗಲೇ ಬಾಯಿತಪ್ಪಿನಿಂದ ನೀಡಿದ ಹೇಳಿಕೆಗೆ ಅವರು ಕ್ಷಮೆ ಕೇಳಿದ್ದಾರೆ’ ಎಂದರು.</p>.<p class="Subhead">ನೋಟಿಸ್ ನೀಡುವೆ: ‘ರಾಷ್ಟ್ರೀಯ ವೈದ್ಯಕೀಯ ಮಂಡಳಿಗೆ ಸದಸ್ಯರನ್ನು ನೇಮಿಸುವ ಸಂಬಂಧ ನನ್ನ ಕಚೇರಿಯ ಸಿಬ್ಬಂದಿಗೆ ₹ 2.5 ಕೋಟಿ ಹಣ ಸಂದಾಯವಾಗಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ನ ಎಸ್.ಎಲ್. ಭೋಜೇಗೌಡ ಅವರಿಗೆ ನೋಟಿಸ್ ನೀಡಲಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ಪ್ರಧಾನಿ ನರೇಂದ್ರ ಮೋದಿ ಅವರ ಕೈಕೆಳಗೆ ನಾನು ಪ್ರಮುಖ ಖಾತೆ ನಿರ್ವಹಿಸುತ್ತಿದ್ದೇನೆ. ಅಲ್ಲಿ ನನಗೆ ಸಂತೃಪ್ತಿ ಇದೆ. ಬೇರೆ ಹುದ್ದೆಗಳ ಬಗ್ಗೆ ಚಿಂತಿಸುವ ಪ್ರಶ್ನೆಯೇ ಇಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಪೇಶ್ವೆ ವಂಶದವರು ಮುಖ್ಯಮಂತ್ರಿ ಆಗಬಾರದು ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶನಿವಾರ ಪ್ರತಿಕ್ರಿಯಿಸಿದರು. ‘ಕುಮಾರಸ್ವಾಮಿ ಅವರ ಅಪ್ರಬುದ್ಧ–ಬಾಲಿಶ ಹೇಳಿಕೆಗಳಿಗೆ ಇದಕ್ಕಿಂತ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ’ ಎಂದರು.</p>.<p>‘ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು’ ಎಂಬ ಸಚಿವ ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಈಗಾಗಲೇ ಬಾಯಿತಪ್ಪಿನಿಂದ ನೀಡಿದ ಹೇಳಿಕೆಗೆ ಅವರು ಕ್ಷಮೆ ಕೇಳಿದ್ದಾರೆ’ ಎಂದರು.</p>.<p class="Subhead">ನೋಟಿಸ್ ನೀಡುವೆ: ‘ರಾಷ್ಟ್ರೀಯ ವೈದ್ಯಕೀಯ ಮಂಡಳಿಗೆ ಸದಸ್ಯರನ್ನು ನೇಮಿಸುವ ಸಂಬಂಧ ನನ್ನ ಕಚೇರಿಯ ಸಿಬ್ಬಂದಿಗೆ ₹ 2.5 ಕೋಟಿ ಹಣ ಸಂದಾಯವಾಗಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ನ ಎಸ್.ಎಲ್. ಭೋಜೇಗೌಡ ಅವರಿಗೆ ನೋಟಿಸ್ ನೀಡಲಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>