‘ರಾಜ್ಯ ಸರ್ಕಾರ 17 ಜಿಲ್ಲೆಗಳ 37 ತಾಲ್ಲೂಕುಗಳಲ್ಲಿ ₹ 8 ಲಕ್ಷ ವೆಚ್ಚ ಮಾಡಿ ಕುಂಚಿಟಿಗ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ನಡೆಸಿದೆ. ಅಲ್ಲದೆ, ಸಮುದಾಯದ ಸ್ಥಿತಿಗತಿಯ ಸಮಗ್ರ ಮಾಹಿತಿಗಳನ್ನು ಒಳಗೊಂಡ 362 ಪುಟಗಳ ವರದಿ ಮತ್ತು ಅದರ ಆಧಾರದಲ್ಲಿ ಸಮುದಾಯವನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರ ಹಿಂದುಳಿದ ವರ್ಗಗಳ ಆಯೋಗಕ್ಕೆ (ಎನ್ಸಿಬಿಸಿ) ರಾಜ್ಯ ಹಿಂದುಳಿದ ವರ್ಗಗಳ ಇಲಾಖೆ ಶಿಫಾರಸು ಮಾಡಿತ್ತು’ ಎಂದು ಮುರಳೀಧರ ಹಾಲಪ್ಪ ತಿಳಿಸಿದರು.