ಹುಳಿಯಾರು ಪಟ್ಟಣದ ಪೆಟ್ರೋಲ್ ಬಂಕ್ ವೃತ್ತದಲ್ಲಿ ಕನಕದಾಸರ ನಾಮಫಲಕ ಅಳವಡಿಕೆ ಸಂಬಂಧ ಎರಡು ಗುಂಪುಗಳ ನಡುವೆ ಸದ್ಯ ವಿವಾದ ಉದ್ಭವಿಸಿದ್ದು, ಈ ಕುರಿತು ಚರ್ಚೆ ನಡೆಸಲು ಈಚೆಗೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಶಾಂತಿಸಭೆ ಆಯೋಜಿಸಲಾಗಿತ್ತು. ಆದರೆ, ಸಭೆಯಲ್ಲಿ ಒಮ್ಮತ ಮೂಡದ ಕಾರಣ ಸಭೆ ಅಪೂರ್ಣಗೊಂಡಿತ್ತು. ಸಭೆಯಲ್ಲಿ ಕಾಗಿನೆಲೆ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಸೇರಿದಂತೆ ಕುರುಬ ಸಮಾಜದ ಮುಖಂಡರು ಭಾಗವಹಿಸಿದ್ದರು.