<p><strong>ರಾಯಚೂರು:</strong> ‘ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕೇಂದ್ರ ಕೆಲವಷ್ಟು ಮಾಹಿತಿ ಕೇಳಿತ್ತು. ಪುನಃ ಸ್ಪಷ್ಟೀಕರಣ ಸಹಿತ ಮತ್ತೇ ಕೇಂದ್ರಕ್ಕೆ ಶಿಫಾರಸು ಮಾಡಿ ಕಳಿಸಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.</p><p>ದೇವದುರ್ಗ ತಾಲ್ಲೂಕಿನ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ತಿಂಥಣಿ ಬ್ರಿಜ್ ಶಾಖಾ ಮಠದಲ್ಲಿ ಭಾನುವಾರ ಶ್ರೀ ಸಿದ್ದರಾಮನಂದಪುರಿ ಸ್ವಾಮೀಜಿ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ಈ ಮೊದಲು ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಗೊಂಡ ಕುರುಬ ಸಮುದಾಯವನ್ನು ಮಾತ್ರ ಉಲ್ಲೇಖಿಸಿ ಕಳುಹಿಸಿದ್ದೆ. ಈಗ ರಾಜ್ಯ ಎಲ್ಲ ಕುರುಬ ಸಮುದಾಯವನ್ನು ಉಲ್ಲೇಖಿಸಿ ಶಿಫಾರಸು ಮಾಡಿರುವೆ. ರಾಜ್ಯ ಸರ್ಕಾರದ ಕೈಯಲ್ಲಿದ್ದರೆ ಆಗಲೇ ಎಸ್ಟಿಗೆ ಸೇರಿಸಿ ಬಿಡುತ್ತಿದ್ದೆ’ ಎಂದು ತಿಳಿಸಿದರು.</p><p><strong>ಇನ್ನೊಂದು ತಿಂಗಳಲ್ಲಿ ಜಾತಿಗಣತಿ ಬಿಡುಗಡೆ:</strong></p><p>‘ಜಾತಿ ಗಣತಿ ವರದಿ ಶಿಫಾರಸು ಮಾಡಿಕೊಟ್ಟ ಒಂದು ತಿಂಗಳಲ್ಲೇ ಬಿಡುಗಡೆ ಮಾಡಲಾಗುವುದು‘ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.</p><p>‘ಸರ್ಕಾರದ ಮುಂದೆ ವರದಿ ಸಲ್ಲಿಕೆಯಾದ ನಂತರ ಚರ್ಚೆ ಮಾಡಿ ಅಂಗೀಕಾರ ಮಾಡಲಾಗುವುದು. ಜಾತಿ ಗಣತಿ ಬಿಡುಗಡೆಗೆ ಗರಿಷ್ಠ ಅಂದರೆ ಎರಡು ತಿಂಗಳಾಗಬಹುದು ಅಷ್ಟೇ‘ ಎಂದರು.</p><p>‘ನಾನು ಅಧಿಕಾರದ ಹಿಂದೆ ಬಿದ್ದವನಲ್ಲ. ಹೋರಾಟ ಮಾಡಿಕೊಂಡು ಬಂದವನು. ನನ್ನ ಶಕ್ತಿ ಇರುವ ತನಕ ರಾಜಕೀಯ ಮಾಡುತ್ತೇನೆ. ಧ್ವನಿಯಿಲ್ಲದವರಿಗೆ ಧ್ವನಿಯಾಗುವ ಕೆಲಸ ಮಾಡುತ್ತೇನೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕೇಂದ್ರ ಕೆಲವಷ್ಟು ಮಾಹಿತಿ ಕೇಳಿತ್ತು. ಪುನಃ ಸ್ಪಷ್ಟೀಕರಣ ಸಹಿತ ಮತ್ತೇ ಕೇಂದ್ರಕ್ಕೆ ಶಿಫಾರಸು ಮಾಡಿ ಕಳಿಸಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.</p><p>ದೇವದುರ್ಗ ತಾಲ್ಲೂಕಿನ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ತಿಂಥಣಿ ಬ್ರಿಜ್ ಶಾಖಾ ಮಠದಲ್ಲಿ ಭಾನುವಾರ ಶ್ರೀ ಸಿದ್ದರಾಮನಂದಪುರಿ ಸ್ವಾಮೀಜಿ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ಈ ಮೊದಲು ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಗೊಂಡ ಕುರುಬ ಸಮುದಾಯವನ್ನು ಮಾತ್ರ ಉಲ್ಲೇಖಿಸಿ ಕಳುಹಿಸಿದ್ದೆ. ಈಗ ರಾಜ್ಯ ಎಲ್ಲ ಕುರುಬ ಸಮುದಾಯವನ್ನು ಉಲ್ಲೇಖಿಸಿ ಶಿಫಾರಸು ಮಾಡಿರುವೆ. ರಾಜ್ಯ ಸರ್ಕಾರದ ಕೈಯಲ್ಲಿದ್ದರೆ ಆಗಲೇ ಎಸ್ಟಿಗೆ ಸೇರಿಸಿ ಬಿಡುತ್ತಿದ್ದೆ’ ಎಂದು ತಿಳಿಸಿದರು.</p><p><strong>ಇನ್ನೊಂದು ತಿಂಗಳಲ್ಲಿ ಜಾತಿಗಣತಿ ಬಿಡುಗಡೆ:</strong></p><p>‘ಜಾತಿ ಗಣತಿ ವರದಿ ಶಿಫಾರಸು ಮಾಡಿಕೊಟ್ಟ ಒಂದು ತಿಂಗಳಲ್ಲೇ ಬಿಡುಗಡೆ ಮಾಡಲಾಗುವುದು‘ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.</p><p>‘ಸರ್ಕಾರದ ಮುಂದೆ ವರದಿ ಸಲ್ಲಿಕೆಯಾದ ನಂತರ ಚರ್ಚೆ ಮಾಡಿ ಅಂಗೀಕಾರ ಮಾಡಲಾಗುವುದು. ಜಾತಿ ಗಣತಿ ಬಿಡುಗಡೆಗೆ ಗರಿಷ್ಠ ಅಂದರೆ ಎರಡು ತಿಂಗಳಾಗಬಹುದು ಅಷ್ಟೇ‘ ಎಂದರು.</p><p>‘ನಾನು ಅಧಿಕಾರದ ಹಿಂದೆ ಬಿದ್ದವನಲ್ಲ. ಹೋರಾಟ ಮಾಡಿಕೊಂಡು ಬಂದವನು. ನನ್ನ ಶಕ್ತಿ ಇರುವ ತನಕ ರಾಜಕೀಯ ಮಾಡುತ್ತೇನೆ. ಧ್ವನಿಯಿಲ್ಲದವರಿಗೆ ಧ್ವನಿಯಾಗುವ ಕೆಲಸ ಮಾಡುತ್ತೇನೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>