ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿರುವ ಕುರುಬ ಸಮಾಜದ ಜನರ ಆಚಾರ–ವಿಚಾರ, ಭಾಷೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ, ಭೌಗೋಳಿಕ ಅಂಶಗಳ ಕುರಿತಂತೆ ಅಂದಾಜು ₹ 40 ಲಕ್ಷ ವೆಚ್ಚದಲ್ಲಿ ಅಧ್ಯಯನ ಕೈಗೊಳ್ಳಲು ಸೂಚಿಸಲಾಗಿದೆ. ಆರು ತಿಂಗಳಲ್ಲಿ ಅಧ್ಯಯನ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.