ಹಲ್ಲೆಗೆ ಒಳಗಾದ ಸಾಗರನ ಮುಖ, ಕುತ್ತಿಗೆ ,ಎದೆ ಭಾಗಕ್ಕೆ ತೀವ್ರವಾಗಿ ಗಾಯವಾಗಿದ್ದು,ರಕ್ತದ ಮಡುವಿನಲ್ಲಿ ಒದ್ದಾಡಿ ಬಿದ್ದಿದ್ದಾನೆ. ಆತನ ಸ್ನೇಹಿತ ಚೇತನ್ ಕೂಡ ಡಿಕ್ಕಿಯಿಂದ ಗಾಯಗೊಂಡಿದ್ದಾನೆ. ಜೋರಾದ ಶಬ್ದ ಕೇಳಿ ಮನೆಯಿಂದ ಹೊರಗೆ ಬಂದ ಎಂಜಿನಿಯರಿಂಗ್ ವರ್ಕ್ಸ್ ಮಾಲೀಕ ಸುರೇಶ್, ತಕ್ಷಣ ಪೊಲೀಸರು ಹಾಗೂ ಆಂಬುಲೆನ್ಸ್ಗೆ ಮಾಹಿತಿ ನೀಡಿದೆ ಎಂದು ತಿಳಿಸಿದರು. ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನೂ ಮೈಸೂರು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.