ಶಂಕರಮೂರ್ತಿ ಅವರ ಸಾಮಾಜಿಕ ಸೇವೆ ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿನ ಸೇವೆ ಪರಿಗಣಿಸಿ ನಿವೃತ್ತ ಕುಲಪತಿ ಪ್ರೊ.ಟಿ.ವಿ.ಕಟ್ಟಿಮನಿ, ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಟೆಕ್ನಾಲಜಿಯ ಮುಖ್ಯಸ್ಥೆ ಗೀತಾ ನಾರಾಯಣನ್, ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ಅಂಧರ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷ ಮಹಾಂತೇಶ ಜಿ.ಕಿವಡಸಣ್ಣವರ, ಯೋಗ ಕ್ಷೇತ್ರದಲ್ಲಿನ ಕೆಲಸ ಗುರುತಿಸಿ ಶಿವಮೊಗ್ಗದ ಭ.ಮ.ಶ್ರೀಕಂಠ ಹಾಗೂ ಬಾ.ಸು.ಅರವಿಂದ ಅವರಿಗೆ ಡಾಕ್ಟರೇಟ್ ಕೊಡಲಾಗುತ್ತಿದೆ ಎಂದು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.