<p>ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್ಕ್ಲಾಸ್ ಗಳ ನಿರ್ಮಾಣಕ್ಕಾಗಿ ನೀಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಎಸ್ಸಿಎಸ್ಪಿ, ಟಿಎಸ್ಪಿ) ಹಣ ದುರುಪಯೋಗ ಕುರಿತು ತನಿಖೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗುರುರಾಜನ್ ಅವರನ್ನು ನೇಮಿಸಲಾಗಿದೆ.</p>.<p>ಹಣ ದುರುಪಯೋಗ ಕುರಿತು ನೇಮಕವಾದ ಏಕಸದಸ್ಯ ತನಿಖಾ ಸಮಿತಿಯು ಸೂಕ್ತ ತನಿಖೆ ನಡೆಸಿ, ಒಂದು ತಿಂಗಳ ಒಳಗೆ ವರದಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶ ಹೊರಡಿಸಿದ್ದಾರೆ. ಸಮಿತಿಗೆ ನೆರವು ನೀಡುವ ಜವಾಬ್ದಾರಿಯನ್ನು ಲೋಕಭವನದ ವಕೀಲ ಅಭಿಷೇಕ್ ಕುಮಾರ್ ಅವರಿಗೆ ವಹಿಸಲಾಗಿದೆ.</p>.<p>ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್ಕ್ಲಾಸ್ ಸೌಲಭ್ಯ ಒದಗಿಸಲು 2022ನೇ ಜನವರಿಯಲ್ಲಿ ರಾಜ್ಯ ಸರ್ಕಾರ ₹5 ಕೋಟಿ ಅನುದಾನ ಒದಗಿಸಿತ್ತು. ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ‘ಸ್ಮಾರ್ಟ್ಕ್ಲಾಸ್’ಗಳನ್ನು ಸಿದ್ಧಪಡಿಸಲಾಗಿತ್ತು. ಆದರೆ, ಮಾರುಕಟ್ಟೆ ಬೆಲೆಗಿಂತ ಅಧಿಕ ದರದಲ್ಲಿ ಸಾಮಗ್ರಿಗಳನ್ನು ಖರೀದಿಸಿ ವಂಚಿಸಲಾಗಿದೆ. ಭೌತಿಕ ಪರಿಶೀಲನೆ ನಡೆಸದೆ, ನಗದು ರಸೀದಿ ಪಡೆಯದೆ ಗುತ್ತಿಗೆ ಕಂಪನಿಯೊಂದಕ್ಕೆ ₹2.99 ಕೋಟಿ ಪಾವತಿಸಲಾಗಿದೆ ಎಂದು ಕೆಲವರು ಉನ್ನತ ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು.</p>.<p>ಈ ಕುರಿತು ಈಗಾಗಲೇ ಶಿವಮೊಗ್ಗ ಜಿಲ್ಲಾ ನ್ಯಾಯಾಧೀಶ ಎಚ್.ಬಿ.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸ ಲಾಗಿತ್ತು. ಸಮಿತಿಯು ಅಂದಿನ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಸೇರಿದಂತೆ ಹಲವು ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ವರದಿ ನೀಡಿತ್ತು. ರಾಜ್ಯ ಸರ್ಕಾರ ಸಲ್ಲಿಸಿದ ಈ ವರದಿಯ ಆಧಾರದಲ್ಲಿ ದೂರುಗಳ ಸತ್ಯಾಸತ್ಯತೆ ಪರಿಶೀಲಿಸಲು ಹೊಸ ಸಮಿತಿ ರಚಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-51-1788007756</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್ಕ್ಲಾಸ್ ಗಳ ನಿರ್ಮಾಣಕ್ಕಾಗಿ ನೀಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಎಸ್ಸಿಎಸ್ಪಿ, ಟಿಎಸ್ಪಿ) ಹಣ ದುರುಪಯೋಗ ಕುರಿತು ತನಿಖೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗುರುರಾಜನ್ ಅವರನ್ನು ನೇಮಿಸಲಾಗಿದೆ.</p>.<p>ಹಣ ದುರುಪಯೋಗ ಕುರಿತು ನೇಮಕವಾದ ಏಕಸದಸ್ಯ ತನಿಖಾ ಸಮಿತಿಯು ಸೂಕ್ತ ತನಿಖೆ ನಡೆಸಿ, ಒಂದು ತಿಂಗಳ ಒಳಗೆ ವರದಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶ ಹೊರಡಿಸಿದ್ದಾರೆ. ಸಮಿತಿಗೆ ನೆರವು ನೀಡುವ ಜವಾಬ್ದಾರಿಯನ್ನು ಲೋಕಭವನದ ವಕೀಲ ಅಭಿಷೇಕ್ ಕುಮಾರ್ ಅವರಿಗೆ ವಹಿಸಲಾಗಿದೆ.</p>.<p>ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್ಕ್ಲಾಸ್ ಸೌಲಭ್ಯ ಒದಗಿಸಲು 2022ನೇ ಜನವರಿಯಲ್ಲಿ ರಾಜ್ಯ ಸರ್ಕಾರ ₹5 ಕೋಟಿ ಅನುದಾನ ಒದಗಿಸಿತ್ತು. ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ‘ಸ್ಮಾರ್ಟ್ಕ್ಲಾಸ್’ಗಳನ್ನು ಸಿದ್ಧಪಡಿಸಲಾಗಿತ್ತು. ಆದರೆ, ಮಾರುಕಟ್ಟೆ ಬೆಲೆಗಿಂತ ಅಧಿಕ ದರದಲ್ಲಿ ಸಾಮಗ್ರಿಗಳನ್ನು ಖರೀದಿಸಿ ವಂಚಿಸಲಾಗಿದೆ. ಭೌತಿಕ ಪರಿಶೀಲನೆ ನಡೆಸದೆ, ನಗದು ರಸೀದಿ ಪಡೆಯದೆ ಗುತ್ತಿಗೆ ಕಂಪನಿಯೊಂದಕ್ಕೆ ₹2.99 ಕೋಟಿ ಪಾವತಿಸಲಾಗಿದೆ ಎಂದು ಕೆಲವರು ಉನ್ನತ ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು.</p>.<p>ಈ ಕುರಿತು ಈಗಾಗಲೇ ಶಿವಮೊಗ್ಗ ಜಿಲ್ಲಾ ನ್ಯಾಯಾಧೀಶ ಎಚ್.ಬಿ.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸ ಲಾಗಿತ್ತು. ಸಮಿತಿಯು ಅಂದಿನ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಸೇರಿದಂತೆ ಹಲವು ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ವರದಿ ನೀಡಿತ್ತು. ರಾಜ್ಯ ಸರ್ಕಾರ ಸಲ್ಲಿಸಿದ ಈ ವರದಿಯ ಆಧಾರದಲ್ಲಿ ದೂರುಗಳ ಸತ್ಯಾಸತ್ಯತೆ ಪರಿಶೀಲಿಸಲು ಹೊಸ ಸಮಿತಿ ರಚಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-51-1788007756</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>