ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಈ ಯೋಜನೆಗೆ ಹರಿಯಾಣ, ಬಿಹಾರ, ತೆಲಂಗಾಣದ ಯುವ ಜನಾಂಗ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದೆ. ಇದರಿಂದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗುತ್ತಿದೆ. ರೈಲುಗಳಿಗೆ ಬೆಂಕಿ ಹಾಕಲಾಗಿದೆ. ಕಾಂಗ್ರೆಸ್ ಕೂಡ ಯೋಜನೆಯ ಬಗ್ಗೆ ಮರು ಚಿಂತನೆ ಮಾಡಲು ಒತ್ತಾಯಿಸಿದೆ’ ಎಂದರು.