ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಕರ್ನಾಟಕದಲ್ಲಿ ಕಾಂಗ್ರೆಸ್ 28 ಸ್ಥಾನಗಳಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕಿತ್ತು. ನಾವು ಉತ್ತಮ ತಂತ್ರಗಾರಿಕೆಯನ್ನು ಅಳವಡಿಸಿಕೊಂಡಿದ್ದರೆ ಲೋಕಸಭಾ ಚುನಾವಣೆಯಲ್ಲೂ ಜಯಭೇರಿ ಬಾರಿಸುತ್ತಿದ್ದೆವು. ನಾವು ನಿಷ್ಠಾವಂತ ಕಾರ್ಯಕರ್ತರನ್ನು ಪರಿಗಣಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.