ಕರ್ನಾಟಕದಲ್ಲಿ ಈ ಬಾರಿ ಮಳೆ ಬಂದಿಲ್ಲ. ಅಣೆಕಟ್ಟೆಗಳು ಖಾಲಿ ಇವೆ. ಶೇ 75 ರಷ್ಟು ತಾಲ್ಲೂಕುಗಳು ಬರಗಾಲಕ್ಕೆ ತುತ್ತಾಗಿವೆ. ಕುಡಿಯುವ ನೀರಿನ ಸಮಸ್ಯೆಯೂ ತೀವ್ರವಾಗಿದೆ. ಕರ್ನಾಟಕದ ಪರಿಸ್ಥಿತಿಯನ್ನು ತಮಿಳುನಾಡು ಅರ್ಥ ಮಾಡಿಕೊಳ್ಳಬೇಕು. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಅನ್ಯ ರಾಜ್ಯಗಳ ವಲಸಿಗರ ಸಂಖ್ಯೆಯೂ ಹೆಚ್ಚಾಗಿದೆ. ವಲಸೆ ಎಲ್ಲ ರಾಜ್ಯಗಳಲ್ಲೂ ಇದೆ. ತಮಿಳುನಾಡಿನ ಜನರ ಕರ್ನಾಟಕದಲ್ಲಿ ಭಾರಿ ಸಂಖ್ಯೆಯಲ್ಲಿದ್ದಾರೆ. ಇವೆಲ್ಲವನ್ನೂ ತಮಿಳುನಾಡು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.