‘ಜಿಲ್ಲಾ ಮಟ್ಟದ ಸಮಿತಿಗಳಿಗೆ ಆಯಾ ಜಿಲ್ಲಾಧಿಕಾರಿಗಳು ಮುಖ್ಯಸ್ಥರಾಗಿರಬೇಕು. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅರಣ್ಯ ಇಲಾಖೆ ಅಧಿಕಾರಿ, ಸಣ್ಣ ನೀರಾವರಿ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್ಪಿಸಿಬಿ) ಪ್ರತಿನಿಧಿಗಳು ಸದಸ್ಯರಾಗಿರುತ್ತಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಸದಸ್ಯ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಬೇಕು’ ಎಂದು ಪೀಠ ತಿಳಿಸಿದೆ.