<p><strong>ಬೆಳಗಾವಿ</strong>: ‘ಕಾಂಗ್ರೆಸ್ ಹೈಕಮಾಂಡ್ ನೇರವಾಗಿ ಜೇನುಗೂಡಿಗೆ ಕೈ ಹಾಕಿದೆ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಮೂಲಕ ರಾಜ್ಯವನ್ನು ಸತ್ಯಾನಾಸ (ಸತ್ಯನಾಶ) ಮಾಡಿದೆ. ಸಿದ್ದರಾಮಯ್ಯ ಕಣ್ಣೀರು 2028ಕ್ಕೆ ಜ್ವಾಲಾಮುಖಿ ಆಗಿ ಸ್ಫೋಟಿಸಲಿದೆ’ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಸದಸ್ಯ ಲಖನ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.</p><p>ಮಾಧ್ಯಮಗಳಿಗೆ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ ಅವರು, ‘ಸಿದ್ದರಾಮಯ್ಯ ರಾಜೀನಾಮೆ ಕಾಂಗ್ರೆಸ್ ಪತನಕ್ಕೆ ಕಾರಣವಾಗುತ್ತದೆ. ರಾಜ್ಯವೂ ಅಧಃಪತನಕ್ಕೆ ಹೋಗುತ್ತದೆ. ಅಹಿಂದ ಚಳವಳಿಯನ್ನೇ ಹೈಕಮಾಂಡ್ ತಿಳಿದುಹಾಕಿದೆ’ ಎಂದಿದ್ದಾರೆ.</p><p>‘ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಶಿಸ್ತಿನಿಂದ ಜಾರಿಗೊಳಿಸಿದ್ದರು. ಆರ್ಥಿಕ ನಷ್ಟವಾಗದಂತೆ ನಿಭಾಯಿಸಿದ್ದರು. ಇನ್ನು ಮುಂದೆ ಯಾವುದೇ ಗ್ಯಾರಂಟಿ ಯೋಜನೆ ಮುಂದುವರಿಯುವುದಿಲ್ಲ. ಕಾಂಗ್ರೆಸ್ ನಾಯಕರಾದ ವೇಣುಗೋಪಾಲ ಹಾಗೂ ಸುರ್ಜೇವಾಲಾ ಅವರಿಗೆ ರಾಜ್ಯದ ನಿಜವಾದ ಸಮಸ್ಯೆಯ ಅರಿವಿಲ್ಲ. ತಾವೇ ಹೋರಾಟ ಮಾಡಿ ಸರ್ಕಾರ ತಂದಂತೆ ವರ್ತಿಸುತ್ತಿದ್ದಾರೆ’ ಎಂದೂ ಕಿಡಿ ಕಾರಿದ್ದಾರೆ.</p><p>‘2028ಕ್ಕೆ ಕಾಂಗ್ರೆಸ್ ರಾಜ್ಯದಲ್ಲಿ 40 ಸ್ಥಾನ ಕೂಡ ಗೆಲ್ಲಲು ಸಾಧ್ಯವಾಗುವುದಿಲ್ಲ. ಸಿದ್ದರಾಮಯ್ಯ ಐದೂ ವರ್ಷ ಪೂರೈಸಿ ಚುನಾವಣೆಗೆ ಹೋಗಬೇಕಿತ್ತು. ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಆಗಿದ್ದರು, ಹಿರಿಯ ನಾಯಕರಿಗೂ ಸಚಿವ ಸ್ಥಾನಗಳಿದ್ದವು. ಇನ್ನು ಮುಂದೆ ಪರಿಸ್ಥಿತಿ ಹದಗೆಡಲಿದೆ. ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ ಪರಿಣಾಮವನ್ನು ಬಿಜೆಪಿ ಈಗಲೂ ಎದುರಿಸುತ್ತಿದೆ. ಮುಂದೆ ಕಾಂಗ್ರೆಸ್ಗೂ ಇದೇ ಪರಿಸ್ಥಿತಿ ಬರಲಿದೆ. ‘ಮಾಸ್ ಲೀಡರ್’ ಒಬ್ಬರನ್ನು ಅಧಿಕಾರದಿಂದ ಕಿತ್ತೊಗೆಯುವುದನ್ನು ಜನ ಸಹಿಸುವುದಿಲ್ಲ’ ಎಂದಿದ್ದಾರೆ.</p><p>‘ದಾವಣಗೆರೆ, ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲು ಅಹಿಂದ ಮತಗಳೇ ಕಾರಣ. ಈಗ ಅಹಿಂದ ನಾಯಕನನ್ನೇ ತುಳಿದಿದ್ದಾರೆ. ಕುರುಬ ಸಮಾಜ ಯಾವತ್ತೂ ಇದನ್ನು ಕ್ಷಮಿಸಬಾರದು, ಪಾಠ ಕಲಿಸಬೇಕು’ ಎಂದು ಹೇಳಿಕೆ ನೀಡಿದ್ದಾರೆ.</p><p>‘ಸತೀಶ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗುವ ಸೂಚನೆ ಬಂದಿದೆಯೇ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಖನ್, ‘ಕಾಂಗ್ರೆಸ್ ಹೈಕಮಾಂಡ್ ಟಪಾಲಿನಲ್ಲಿ ಯಾರ ಹೆಸರು ಬರೆದು ಕಳಿಸುತ್ತದೆ ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕಾಂಗ್ರೆಸ್ ಹೈಕಮಾಂಡ್ ನೇರವಾಗಿ ಜೇನುಗೂಡಿಗೆ ಕೈ ಹಾಕಿದೆ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಮೂಲಕ ರಾಜ್ಯವನ್ನು ಸತ್ಯಾನಾಸ (ಸತ್ಯನಾಶ) ಮಾಡಿದೆ. ಸಿದ್ದರಾಮಯ್ಯ ಕಣ್ಣೀರು 2028ಕ್ಕೆ ಜ್ವಾಲಾಮುಖಿ ಆಗಿ ಸ್ಫೋಟಿಸಲಿದೆ’ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಸದಸ್ಯ ಲಖನ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.</p><p>ಮಾಧ್ಯಮಗಳಿಗೆ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ ಅವರು, ‘ಸಿದ್ದರಾಮಯ್ಯ ರಾಜೀನಾಮೆ ಕಾಂಗ್ರೆಸ್ ಪತನಕ್ಕೆ ಕಾರಣವಾಗುತ್ತದೆ. ರಾಜ್ಯವೂ ಅಧಃಪತನಕ್ಕೆ ಹೋಗುತ್ತದೆ. ಅಹಿಂದ ಚಳವಳಿಯನ್ನೇ ಹೈಕಮಾಂಡ್ ತಿಳಿದುಹಾಕಿದೆ’ ಎಂದಿದ್ದಾರೆ.</p><p>‘ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಶಿಸ್ತಿನಿಂದ ಜಾರಿಗೊಳಿಸಿದ್ದರು. ಆರ್ಥಿಕ ನಷ್ಟವಾಗದಂತೆ ನಿಭಾಯಿಸಿದ್ದರು. ಇನ್ನು ಮುಂದೆ ಯಾವುದೇ ಗ್ಯಾರಂಟಿ ಯೋಜನೆ ಮುಂದುವರಿಯುವುದಿಲ್ಲ. ಕಾಂಗ್ರೆಸ್ ನಾಯಕರಾದ ವೇಣುಗೋಪಾಲ ಹಾಗೂ ಸುರ್ಜೇವಾಲಾ ಅವರಿಗೆ ರಾಜ್ಯದ ನಿಜವಾದ ಸಮಸ್ಯೆಯ ಅರಿವಿಲ್ಲ. ತಾವೇ ಹೋರಾಟ ಮಾಡಿ ಸರ್ಕಾರ ತಂದಂತೆ ವರ್ತಿಸುತ್ತಿದ್ದಾರೆ’ ಎಂದೂ ಕಿಡಿ ಕಾರಿದ್ದಾರೆ.</p><p>‘2028ಕ್ಕೆ ಕಾಂಗ್ರೆಸ್ ರಾಜ್ಯದಲ್ಲಿ 40 ಸ್ಥಾನ ಕೂಡ ಗೆಲ್ಲಲು ಸಾಧ್ಯವಾಗುವುದಿಲ್ಲ. ಸಿದ್ದರಾಮಯ್ಯ ಐದೂ ವರ್ಷ ಪೂರೈಸಿ ಚುನಾವಣೆಗೆ ಹೋಗಬೇಕಿತ್ತು. ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಆಗಿದ್ದರು, ಹಿರಿಯ ನಾಯಕರಿಗೂ ಸಚಿವ ಸ್ಥಾನಗಳಿದ್ದವು. ಇನ್ನು ಮುಂದೆ ಪರಿಸ್ಥಿತಿ ಹದಗೆಡಲಿದೆ. ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ ಪರಿಣಾಮವನ್ನು ಬಿಜೆಪಿ ಈಗಲೂ ಎದುರಿಸುತ್ತಿದೆ. ಮುಂದೆ ಕಾಂಗ್ರೆಸ್ಗೂ ಇದೇ ಪರಿಸ್ಥಿತಿ ಬರಲಿದೆ. ‘ಮಾಸ್ ಲೀಡರ್’ ಒಬ್ಬರನ್ನು ಅಧಿಕಾರದಿಂದ ಕಿತ್ತೊಗೆಯುವುದನ್ನು ಜನ ಸಹಿಸುವುದಿಲ್ಲ’ ಎಂದಿದ್ದಾರೆ.</p><p>‘ದಾವಣಗೆರೆ, ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲು ಅಹಿಂದ ಮತಗಳೇ ಕಾರಣ. ಈಗ ಅಹಿಂದ ನಾಯಕನನ್ನೇ ತುಳಿದಿದ್ದಾರೆ. ಕುರುಬ ಸಮಾಜ ಯಾವತ್ತೂ ಇದನ್ನು ಕ್ಷಮಿಸಬಾರದು, ಪಾಠ ಕಲಿಸಬೇಕು’ ಎಂದು ಹೇಳಿಕೆ ನೀಡಿದ್ದಾರೆ.</p><p>‘ಸತೀಶ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗುವ ಸೂಚನೆ ಬಂದಿದೆಯೇ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಖನ್, ‘ಕಾಂಗ್ರೆಸ್ ಹೈಕಮಾಂಡ್ ಟಪಾಲಿನಲ್ಲಿ ಯಾರ ಹೆಸರು ಬರೆದು ಕಳಿಸುತ್ತದೆ ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>