<p><strong>ಬೆಂಗಳೂರು</strong>: ಹಾಸನದಲ್ಲಿ ಡಿ. 5 ರಂದು ಹಮ್ಮಿಕೊಂಡಿರುವುದು ಸ್ವಾಭಿಮಾನಿ ಸಮಾವೇಶ ಅಲ್ಲ, ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಮಾರಂಭ. ಅಂಥ ಸಮಾವೇಶಗಳನ್ನು ಇತರೆ ಜಿಲ್ಲೆಗಳಲ್ಲೂ ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.</p>.<p>ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದವರು. ಅವರು ಕರ್ನಾಟಕದ ಮುಖ್ಯಮಂತ್ರಿ. ಹಾಗಾಗಿ, ಹಾಸನದಲ್ಲಿ ಅಹಿಂದ ಸಮಾವೇಶ ನಡೆಸುತ್ತಿಲ್ಲ ಎಂದರು.</p>.<p>ಗ್ಯಾರಂಟಿಗಳಿಗಾಗಿ ನಿಗಮದ ಆಸ್ತಿಯನ್ನೇ ಮಾರಾಟ ಮಾಡುವ ದುಸ್ಥಿತಿ ಸರ್ಕಾರಕ್ಕೆ ಬಂದಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಬಿಬಿಎಂಪಿಯನ್ನೇ ಅಡಮಾನ ಇಟ್ಟಿದ್ದರು. ವಿಧಾನಸೌಧ ಒಂದನ್ನ ಬಿಟ್ಟು ಬಹುತೇಕ ಎಲ್ಲ ಆಸ್ತಿಪಾಸ್ತಿಗಳನ್ನೂ ಅಡವಿಟ್ಟಿದ್ದರು. ಸಿದ್ದರಾಮಯ್ಯ ಅವರು ಉತ್ತಮ ಆರ್ಥಿಕ ತಜ್ಞ. ಗ್ಯಾರಂಟಿ ಯೋಜನೆಗಳಿಗೆ ₹58 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ. ಸಾಲದ ಹೊರೆ ಹೊರಿಸಿಲ್ಲ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಾಸನದಲ್ಲಿ ಡಿ. 5 ರಂದು ಹಮ್ಮಿಕೊಂಡಿರುವುದು ಸ್ವಾಭಿಮಾನಿ ಸಮಾವೇಶ ಅಲ್ಲ, ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಮಾರಂಭ. ಅಂಥ ಸಮಾವೇಶಗಳನ್ನು ಇತರೆ ಜಿಲ್ಲೆಗಳಲ್ಲೂ ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.</p>.<p>ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದವರು. ಅವರು ಕರ್ನಾಟಕದ ಮುಖ್ಯಮಂತ್ರಿ. ಹಾಗಾಗಿ, ಹಾಸನದಲ್ಲಿ ಅಹಿಂದ ಸಮಾವೇಶ ನಡೆಸುತ್ತಿಲ್ಲ ಎಂದರು.</p>.<p>ಗ್ಯಾರಂಟಿಗಳಿಗಾಗಿ ನಿಗಮದ ಆಸ್ತಿಯನ್ನೇ ಮಾರಾಟ ಮಾಡುವ ದುಸ್ಥಿತಿ ಸರ್ಕಾರಕ್ಕೆ ಬಂದಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಬಿಬಿಎಂಪಿಯನ್ನೇ ಅಡಮಾನ ಇಟ್ಟಿದ್ದರು. ವಿಧಾನಸೌಧ ಒಂದನ್ನ ಬಿಟ್ಟು ಬಹುತೇಕ ಎಲ್ಲ ಆಸ್ತಿಪಾಸ್ತಿಗಳನ್ನೂ ಅಡವಿಟ್ಟಿದ್ದರು. ಸಿದ್ದರಾಮಯ್ಯ ಅವರು ಉತ್ತಮ ಆರ್ಥಿಕ ತಜ್ಞ. ಗ್ಯಾರಂಟಿ ಯೋಜನೆಗಳಿಗೆ ₹58 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ. ಸಾಲದ ಹೊರೆ ಹೊರಿಸಿಲ್ಲ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>