ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮತ್ತೊಮ್ಮೆ ಪ್ರಧಾನಿ, ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತೇನೆ. ಇಂದು ಮಧ್ಯಾಹ್ನ ಮಠಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತೇನೆ. ದೇವರ ದಯೆಯಿಂದ ಅವರು ಬೇಗ ಗುಣಮುಖರಾಗಲಿ, ಬಹಳ ವರ್ಷಗಳು ನಮ್ಮ ಜೊತೆಇರಲಿ’ ಎಂದು ಹೇಳಿದರು.