<p><strong>ಬೆಂಗಳೂರು:</strong> ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರು ಸಿಬ್ಬಂದಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಸಮನ್ಸ್ ಜಾರಿ ಮಾಡಿದೆ. </p><p>ಬೆಂಗಳೂರಿನಲ್ಲಿರುವ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸೂಚಿಸಲಾಗಿದೆ. </p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯವು (ಇ.ಡಿ), ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿ ಮತ್ತು ಮೈಸೂರು ತಾಲ್ಲೂಕು ಕಚೇರಿಯಲ್ಲಿ ಈಚೆಗೆ ಶೋಧ ಕಾರ್ಯ ನಡೆಸಿತ್ತು.</p><p>ಪಾರ್ವತಿ ಅವರ ಸೋದರ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಕೆಂಗೇರಿ ನಿವಾಸದಲ್ಲೂ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.</p><p>ವಿಚಾರಣೆ ಪೂರ್ಣಗೊಳಿಸಿದ್ದ ಇ.ಡಿ ಅಧಿಕಾರಿಗಳು ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು.</p>.ಮುಡಾ ಹಗರಣ: ಮೇಲ್ಮನವಿ ಸಲ್ಲಿಸಿದ ಸಿ.ಎಂ.ಮುಡಾ ಪ್ರಕರಣ: ದಾಖಲೆ ಜಾಲಾಡಿದ ಇ.ಡಿ.MUDA Scam: ಮುಡಾ ಕಚೇರಿಯಲ್ಲಿ ಮುಂದುವರಿದ ಇ.ಡಿ ಶೋಧ.ಮುಡಾ ಹಗರಣದ ಎಲ್ಲ ದಾಖಲೆಗಳು ಭೈರತಿ ಸುರೇಶ್ ಮನೆಯಲ್ಲಿವೆ: ಶಾಸಕ ಶ್ರೀವತ್ಸ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರು ಸಿಬ್ಬಂದಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಸಮನ್ಸ್ ಜಾರಿ ಮಾಡಿದೆ. </p><p>ಬೆಂಗಳೂರಿನಲ್ಲಿರುವ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸೂಚಿಸಲಾಗಿದೆ. </p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯವು (ಇ.ಡಿ), ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿ ಮತ್ತು ಮೈಸೂರು ತಾಲ್ಲೂಕು ಕಚೇರಿಯಲ್ಲಿ ಈಚೆಗೆ ಶೋಧ ಕಾರ್ಯ ನಡೆಸಿತ್ತು.</p><p>ಪಾರ್ವತಿ ಅವರ ಸೋದರ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಕೆಂಗೇರಿ ನಿವಾಸದಲ್ಲೂ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.</p><p>ವಿಚಾರಣೆ ಪೂರ್ಣಗೊಳಿಸಿದ್ದ ಇ.ಡಿ ಅಧಿಕಾರಿಗಳು ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು.</p>.ಮುಡಾ ಹಗರಣ: ಮೇಲ್ಮನವಿ ಸಲ್ಲಿಸಿದ ಸಿ.ಎಂ.ಮುಡಾ ಪ್ರಕರಣ: ದಾಖಲೆ ಜಾಲಾಡಿದ ಇ.ಡಿ.MUDA Scam: ಮುಡಾ ಕಚೇರಿಯಲ್ಲಿ ಮುಂದುವರಿದ ಇ.ಡಿ ಶೋಧ.ಮುಡಾ ಹಗರಣದ ಎಲ್ಲ ದಾಖಲೆಗಳು ಭೈರತಿ ಸುರೇಶ್ ಮನೆಯಲ್ಲಿವೆ: ಶಾಸಕ ಶ್ರೀವತ್ಸ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>