‘ರಾಜ್ಯದಲ್ಲಿ ಅಂದಾಜು ಶೇ 80ರಷ್ಟು ಸಣ್ಣ ಕೈಗಾರಿಕೆಗಳು ಬಾಡಿಗೆ ಜಾಗದಲ್ಲಿವೆ. ಈ ಕಾಯ್ದೆ ತಿದ್ದುಪಡಿಯಿಂದ ಸ್ವಂತ ಜಾಗದಲ್ಲಿ ಕೈಗಾರಿಕೆಗಳನ್ನು ಆರಂಭಿಸಬಹುದು. ರಾಜ್ಯದಲ್ಲಿ ಲಕ್ಷಾಂತರ ಎಕರೆಗಳಷ್ಟು ಭೂಮಿಯಲ್ಲಿ ಉಳುಮೆ ಮಾಡುತ್ತಿಲ್ಲ. ಕಚ್ಛಾ ವಸ್ತುಗಳು, ಮಾನವ ಸಂಪನ್ಮೂಲ ಇರುವ ಜಾಗದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ, ಸುಮಾರು 90 ಲಕ್ಷ ಉದ್ಯೋಗ ಸೃಷ್ಟಿಯಾಗುತ್ತದೆ. ಕೃಷಿ ಸಂಪತ್ತು ಹೆಚ್ಚುವ ಜೊತೆಗೆ ಗ್ರಾಮೀಣ ಅಭಿವೃದ್ಧಿಯೂ ಆಗಲಿದೆ’ ಎಂದರು.