ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ಆಪಾದಿತರಿಗೆ ಒಂದೇ ದಿನ ಜೈಲು ಶಿಕ್ಷೆ

Last Updated 6 ಫೆಬ್ರುವರಿ 2019, 20:03 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಭೂ ಕಬಳಿಕೆ ತಡೆ ವಿಶೇಷ ನ್ಯಾಯಾಲಯವು ಪ್ರತ್ಯೇಕ ಪ್ರಕರಣಗಳಲ್ಲಿ ಬುಧವಾರ 11 ಆಪಾದಿತರಿಗೆ ತಲಾ ಒಂದು ವರ್ಷ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಒಂದೇ ದಿನ 11 ಮಂದಿಗೆ ಜೈಲು ಶಿಕ್ಷೆ ವಿಧಿಸುವುದು ಇದೇ ಮೊದಲು.

ಉತ್ತರ ಕನ್ನಡ ಹಳಿಯಾಳ ತಹಶೀಲ್ದಾರ್‌ ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ನ್ಯಾಯಾಂಗ ಸದಸ್ಯ ಆರ್‌.ಎಚ್‌.ರಡ್ಡಿ ಹಾಗೂ ಕಂದಾಯ ಸದಸ್ಯ ಕೆ.ಆರ್‌.ನಿರಂಜನ್‌ ಅವರ ಪೀಠ ಆದೇಶ ಹೊರಡಿಸಿದೆ. ಸರ್ಕಾರದ ಪರವಾಗಿ ಶೈಲಜಾ ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT