‘ಜನ-ಕೇಂದ್ರಿತ ಆಡಳಿತದತ್ತ ಹೆಜ್ಜೆ’
‘ಹೊಸ ವ್ಯವಸ್ಥೆಯು ಜನ-ಕೇಂದ್ರಿತ ಆಡಳಿತ ಮತ್ತು ಪಾರದರ್ಶಕ ಆಡಳಿತದ ಕಡೆಗಿನ ಮಹತ್ವದ ಹೆಜ್ಜೆ. ಕಂದಾಯ ನ್ಯಾಯಾಲಯದ ವಿಚಾರಣೆಗಳ ನೇರ ಪ್ರಸಾರವನ್ನು ಪ್ರಾಯೋಗಿಕವಾಗಿ ಆರಂಭಿಸಲು ಆದೇಶ ಹೊರಡಿಸಲಾಗಿದೆ. ಪ್ರಕರಣಗಳ ಅರ್ಜಿದಾರರು ಮತ್ತು ಪ್ರತಿವಾದಿಗಳು ನ್ಯಾಯಾಲಯದ ವಿಚಾರಣೆಗಳನ್ನು ಆನ್ಲೈನ್ನಲ್ಲಿ ವೀಕ್ಷಿಸಲು ಮತ್ತು ವಿಡಿಯೊ ಸಂವಾದದ ಮೂಲಕ ಭಾಗವಹಿಸಲು ಸಾಧ್ಯವಾಗುತ್ತದೆ. ಇದು ಕಂದಾಯ ಇಲಾಖೆಯ ಕಚೇರಿಗಳಿಗೆ ಜನರು ಪದೇ ಪದೇ ಓಡಾಡುವ ಅಗತ್ಯವನ್ನು ಕಡಿಮೆ ಮಾಡುತ್ತದೆ. ಈ ಕ್ರಮವು ಸರ್ಕಾರ ಮತ್ತು ನಾಗರಿಕರ ನಡುವೆ ವಿಶ್ವಾಸವನ್ನು ಬಲಪಡಿಸುವ ಗುರಿ ಹೊಂದಿದೆ’ ಎಂದು ಕೃಷ್ಣ ಬೈರೇಗೌಡ ವಿವರಿಸಿದ್ದಾರೆ.