<p><strong>ಬೆಂಗಳೂರು</strong>: ‘ಮೊದಲೇ ಸರ್ಕಾರಿ ಆದೇಶ ಹೊರಡಿಸಿ ಬಳಿಕ ಸಂಪುಟದ ಮುಂದೆ ಮಂಡಿಸುವುದೆಂದರೆ ಅದು ‘ಕುದುರೆಯ ಮುಂದೆ ಬಂಡಿ ಇಟ್ಟಂತೆ’ ಆಗಲಿದೆ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಬಳ್ಳಾರಿ ಜಿಲ್ಲೆಯಲ್ಲಿ 3,667 ಎಕರೆ ಜಮೀನನ್ನು ಜೆಎಸ್ಡಬ್ಲ್ಯು ಕಂಪೆನಿಗ ನೀಡುವ ವಿಷಯದಲ್ಲಿ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕೆ.ಎ. ಪಾಲ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘2021ರ ಮೇ 6ರಂದು ಹೊರಡಿಸಿರುವ ಆದೇಶಕ್ಕೆ ಸಂಪುಟದ ಅನುಮೋದನೆ ಇದೆಯೇ’ ಎಂಬುದನ್ನು ಸ್ಪಷ್ಟಪಡಿಸುವಂತೆ ತಿಳಿಸಿತು.</p>.<p>ಸಂಪುಟದ ಅನೇಕ ಸಚಿವರು ವಿರೋಧಿಸಿದ್ದರೂ ಕಡಿಮೆ ದರದಲ್ಲಿ ಸರ್ಕಾರಿ ಜಾಗ ಮಾರಾಟ ಮಾಡಲು ಸರ್ಕಾರ ಹೊರಟಿದೆ ಎಂದು ಅರ್ಜಿದಾರರು ಆರೋಪಿಸಿದರು.</p>.<p>‘ಸರ್ಕಾರದ ಆದೇಶವನ್ನು ಸಚಿವ ಸಂಪುಟದ ಮುಂದಿಟ್ಟು ತೀರ್ಮಾನಿಸಲಾಗುವುದು ಎಂದು ಜೂನ್ 15ರ ಮೆಮೊನಲ್ಲಿ ತಿಳಿಸಲಾಗಿದೆ. ಸಚಿವ ಸಂಪುಟದ ತೀರ್ಮಾನ ಆಧರಿಸಿ ಸರ್ಕಾರಿ ಆದೇಶ ಹೊರಡಿಸಬೇಕೆ ಹೊರತು, ಮೊದಲೇ ಸರ್ಕಾರಿ ಆದೇಶ ಹೊರಡಿಸಿ ಬಳಿಕ ಅದನ್ನು ಸಂಪುಟದ ಮುಂದೆ ಇಡಲಾಗುವುದು ಎಂದರೆ ಏನರ್ಥ’ ಎಂದು ಪೀಠ ಪ್ರಶ್ನಿಸಿತು.</p>.<p>ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮೊದಲೇ ಸರ್ಕಾರಿ ಆದೇಶ ಹೊರಡಿಸಿ ಬಳಿಕ ಸಂಪುಟದ ಮುಂದೆ ಮಂಡಿಸುವುದೆಂದರೆ ಅದು ‘ಕುದುರೆಯ ಮುಂದೆ ಬಂಡಿ ಇಟ್ಟಂತೆ’ ಆಗಲಿದೆ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಬಳ್ಳಾರಿ ಜಿಲ್ಲೆಯಲ್ಲಿ 3,667 ಎಕರೆ ಜಮೀನನ್ನು ಜೆಎಸ್ಡಬ್ಲ್ಯು ಕಂಪೆನಿಗ ನೀಡುವ ವಿಷಯದಲ್ಲಿ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕೆ.ಎ. ಪಾಲ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘2021ರ ಮೇ 6ರಂದು ಹೊರಡಿಸಿರುವ ಆದೇಶಕ್ಕೆ ಸಂಪುಟದ ಅನುಮೋದನೆ ಇದೆಯೇ’ ಎಂಬುದನ್ನು ಸ್ಪಷ್ಟಪಡಿಸುವಂತೆ ತಿಳಿಸಿತು.</p>.<p>ಸಂಪುಟದ ಅನೇಕ ಸಚಿವರು ವಿರೋಧಿಸಿದ್ದರೂ ಕಡಿಮೆ ದರದಲ್ಲಿ ಸರ್ಕಾರಿ ಜಾಗ ಮಾರಾಟ ಮಾಡಲು ಸರ್ಕಾರ ಹೊರಟಿದೆ ಎಂದು ಅರ್ಜಿದಾರರು ಆರೋಪಿಸಿದರು.</p>.<p>‘ಸರ್ಕಾರದ ಆದೇಶವನ್ನು ಸಚಿವ ಸಂಪುಟದ ಮುಂದಿಟ್ಟು ತೀರ್ಮಾನಿಸಲಾಗುವುದು ಎಂದು ಜೂನ್ 15ರ ಮೆಮೊನಲ್ಲಿ ತಿಳಿಸಲಾಗಿದೆ. ಸಚಿವ ಸಂಪುಟದ ತೀರ್ಮಾನ ಆಧರಿಸಿ ಸರ್ಕಾರಿ ಆದೇಶ ಹೊರಡಿಸಬೇಕೆ ಹೊರತು, ಮೊದಲೇ ಸರ್ಕಾರಿ ಆದೇಶ ಹೊರಡಿಸಿ ಬಳಿಕ ಅದನ್ನು ಸಂಪುಟದ ಮುಂದೆ ಇಡಲಾಗುವುದು ಎಂದರೆ ಏನರ್ಥ’ ಎಂದು ಪೀಠ ಪ್ರಶ್ನಿಸಿತು.</p>.<p>ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>